ರಾಜ್ಯ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ಸಮಯಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್, ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಜೈಲು ಅಧಿಕಾರಿಗಳ ನಿರ್ಲಕ್ಷ , ಜೈಲಿನ ಬ್ಯಾರಕ್‌ನಲ್ಲಿ ಮೊಬೈಲ್ ಹೇಗೆ ಬಂತು? ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅಲೋಕ್ ಕುಮಾರ್ ಭೇಟಿಯಾಗಿ ಜಿನೇಂದ್ರ ಅವರು ಕೂಡ ಚರ್ಚೆ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಜಾಮರ್ ಅಳವಡಿಸಲಾಗಿದ್ದು, ಸ್ಥಳೀಯರಿಗೆ ಟವರ್ ಸಿಗದೆ ನಿತ್ಯ ಪರದಾಡುತ್ತಾರೆ. ಹೀಗಿರುವಾಗ ಜೈಲಿನ ಒಳಗೆ ಏರ್‌ಟೆಲ್ ಕಪೆನಿಯ ಸಿಮ್ ಬಳಕೆಯಾಗುತ್ತಿದೆ. ಅದರಲ್ಲೂ ಆಂಧ್ರಪ್ರದೇಶದ ಏರ್‌ಟೆಲ್ ಸಿಮ್‌ಗಳು ಪತ್ತೆಯಾಗಿವೆ, ಈ ಬಗ್ಗೆ ಅನೇಕ ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಸಿಮ್‌ಗಳು ಪತ್ತೆ ಆಗುತ್ತಿವೆ. ಹೀಗಾಗಿ ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇಷ್ಟೆಲ್ಲಾ ಭದ್ರತೆ ಇದ್ದರೂ ಜೈಲಿನೊಳಗೆ ಹೇಗೆ ಮೊಬೈಲ್ ಹೋಗುತ್ತಿದೆ, ಇದರಲ್ಲಿ ಅಧಿಕಾರಿಗಳು ಏನಾದರೂ ಭಾಗಿಯಾಗಿದ್ದಾರಾ ಎಂಬ ಬಗ್ಗೆಯೂ ತನಿಖೆ ನಡೆಸುತ್ತೇವೆ. ಅಧಿಕಾರಿಗಳು ಭಾಗಿಯಾಗಿದ್ದರೆ ಅಂತವರ ವಿರುದ್ಧ ಕ್ರಮಕ್ಕೆ ಆದೇಶ ಮಾಡೋದಾಗಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

53 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

15 hours ago