ರಾಜ್ಯ

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago