ಹೊಸದಿಲ್ಲಿ : ಇಂಡಿಗೋ ವಿಮಾನಯಾನ ಸಂಸ್ಥೆಯ ಮೂವರು ಹಿರಿಯ ಅಧಿಕಾರಿಗಳು ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂಸ್ಥೆಯ ಉದ್ಯೋಗಿಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ 35 ವರ್ಷದ ಶರಣ್ ಎಂಬುವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಘಟನೆ ಗುರುಗ್ರಾಮದಲ್ಲಿ ನಡೆದ ಕಾರಣ ಬೆಂಗಳೂರು ಪೊಲೀಸರು ಪ್ರಕರಣವನ್ನು ಗುರುಗ್ರಾಮ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾನು ಪರಿಶಿಷ್ಟ ಜಾತಿಗೆ ಸೇರಿದವನಾಗಿದ್ದು, ಇಂಡಿಗೋ ವಿಮಾನ ಸಂಸ್ಥೆಯ ಹಿರಿಯ ಅಧಿಕಾರಿಗಳು ʻನೀನು ವಿಮಾನ ಹಾರಿಸಲು ಯೋಗ್ಯನಲ್ಲʼ ಬೂಟುಗಳನ್ನು ಹೊಲಿಯಬೇಕು ಎಂದು ನಿಂದಿಸಿದ್ದಾರೆ. ಅಲ್ಲದೇ ಅನೇಕ ವೇಳೆ ನನ್ನನ್ನು ಬಲವಂತವಾಗಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಂಡಿಗೋ ವಿಮಾನ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ಅವರು ಎಲ್ಲರ ಮುಂದೆ ಹಲವು ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪೊಲೀಸರು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…