ರಾಜ್ಯ

ಮುಡಾ ಪ್ರಕರಣ ಮುಚ್ಚಿಡಲು ಜಾತಿಗಣತಿ ನಾಟಕ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗೆಲ್ಲಾ ಸಾರ್ವಜನಿಕರ ಗಮನವನ್ನು ಬೇರೆ ಕಡೆಗೆ ಹರಿಸಲು, ಈ ಸರ್ಕಾರ ಯಾವಾಗಲೂ ತಂತ್ರಗಾರಿಕೆ ಹೂಡುತ್ತದೆ. ಹೀಗಾಗಿ ಮುಡಾ ಪ್ರಕರಣದಿಂದ ದಾರಿ ತಪ್ಪಿಸುವ ಕೆಲಸ ಮಾಡಿ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕವಾಡುತ್ತಿದೆ ಎಂದು ಆರೋಪಿಸಿದರು.

ಜಾತಿಗಣತಿ ಪ್ರಾರಂಭಿಸಲು 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿತ್ತು. ಈ ಹತ್ತು ವರ್ಷಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿವೆ. ಆ ಹತ್ತು ವರ್ಷಗಳ ಜಾತಿಗಣತಿಯನ್ನು ಆಯೋಗವು ಸಿಎಂ ಸಿದ್ದರಾಮಯ್ಯರಿಗೆ ಲೋಕಸಭೆ ಚುನಾವಣೆಗೂ ಮೊದಲೇ ವರದಿ ನೀಡಿತ್ತು. ಹೀಗಿದ್ದರೂ ಹಳೆಯ ಜಾತಿಗಣತಿಯನ್ನು ವರದಿ ಕೊಟ್ಟ ಕೂಡಲೇ ಬಿಡುಗಡೆ ಮಾಡದೇ ಸುಮ್ಮನಿದ್ದು, ಈಗ ಮಾತ್ರ ಯಾಕೆ ಬಿಡುಗಡೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಮುಡಾ ವಿಚಾರವನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಜಾತಿಗಣತಿ ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 

 

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago