ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗೆಲ್ಲಾ ಸಾರ್ವಜನಿಕರ ಗಮನವನ್ನು ಬೇರೆ ಕಡೆಗೆ ಹರಿಸಲು, ಈ ಸರ್ಕಾರ ಯಾವಾಗಲೂ ತಂತ್ರಗಾರಿಕೆ ಹೂಡುತ್ತದೆ. ಹೀಗಾಗಿ ಮುಡಾ ಪ್ರಕರಣದಿಂದ ದಾರಿ ತಪ್ಪಿಸುವ ಕೆಲಸ ಮಾಡಿ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕವಾಡುತ್ತಿದೆ ಎಂದು ಆರೋಪಿಸಿದರು.
ಜಾತಿಗಣತಿ ಪ್ರಾರಂಭಿಸಲು 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿತ್ತು. ಈ ಹತ್ತು ವರ್ಷಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿವೆ. ಆ ಹತ್ತು ವರ್ಷಗಳ ಜಾತಿಗಣತಿಯನ್ನು ಆಯೋಗವು ಸಿಎಂ ಸಿದ್ದರಾಮಯ್ಯರಿಗೆ ಲೋಕಸಭೆ ಚುನಾವಣೆಗೂ ಮೊದಲೇ ವರದಿ ನೀಡಿತ್ತು. ಹೀಗಿದ್ದರೂ ಹಳೆಯ ಜಾತಿಗಣತಿಯನ್ನು ವರದಿ ಕೊಟ್ಟ ಕೂಡಲೇ ಬಿಡುಗಡೆ ಮಾಡದೇ ಸುಮ್ಮನಿದ್ದು, ಈಗ ಮಾತ್ರ ಯಾಕೆ ಬಿಡುಗಡೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಮುಡಾ ವಿಚಾರವನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಜಾತಿಗಣತಿ ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…