ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗೆಲ್ಲಾ ಸಾರ್ವಜನಿಕರ ಗಮನವನ್ನು ಬೇರೆ ಕಡೆಗೆ ಹರಿಸಲು, ಈ ಸರ್ಕಾರ ಯಾವಾಗಲೂ ತಂತ್ರಗಾರಿಕೆ ಹೂಡುತ್ತದೆ. ಹೀಗಾಗಿ ಮುಡಾ ಪ್ರಕರಣದಿಂದ ದಾರಿ ತಪ್ಪಿಸುವ ಕೆಲಸ ಮಾಡಿ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕವಾಡುತ್ತಿದೆ ಎಂದು ಆರೋಪಿಸಿದರು.
ಜಾತಿಗಣತಿ ಪ್ರಾರಂಭಿಸಲು 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿತ್ತು. ಈ ಹತ್ತು ವರ್ಷಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿವೆ. ಆ ಹತ್ತು ವರ್ಷಗಳ ಜಾತಿಗಣತಿಯನ್ನು ಆಯೋಗವು ಸಿಎಂ ಸಿದ್ದರಾಮಯ್ಯರಿಗೆ ಲೋಕಸಭೆ ಚುನಾವಣೆಗೂ ಮೊದಲೇ ವರದಿ ನೀಡಿತ್ತು. ಹೀಗಿದ್ದರೂ ಹಳೆಯ ಜಾತಿಗಣತಿಯನ್ನು ವರದಿ ಕೊಟ್ಟ ಕೂಡಲೇ ಬಿಡುಗಡೆ ಮಾಡದೇ ಸುಮ್ಮನಿದ್ದು, ಈಗ ಮಾತ್ರ ಯಾಕೆ ಬಿಡುಗಡೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಮುಡಾ ವಿಚಾರವನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಜಾತಿಗಣತಿ ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…