ರಾಜ್ಯ

ಜಾತಿಗಣತಿ; ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ ಈಗಲೇ ಜಾರಿ ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ.  ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ. ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ ಜಾತಿಗಣತಿ ಮಾಡಿ ಎಂದು ಕುಮಾರಸ್ವಾಮಿ  ಸಿಎಂಗೆ ಟಾಂಗ್ ಕೊಟ್ಟರು

ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:
ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

7 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

7 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

8 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

8 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

9 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

11 hours ago