ರಾಜ್ಯ

ಎಲ್ಲರ ಅಭಿಪ್ರಾಯದ ಬಳಿಕ ಜಾತಿಗಣತಿ ಬಗ್ಗೆ ಮುಂದಿನ ನಿರ್ಧಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಎಲ್ಲರೂ ಅವರ ಅಭಿಪ್ರಾಯ ಹೇಳಿದ್ದಾರೆ. ಎಲ್ಲರ ಅಭಿಪ್ರಾಯದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ಒಬ್ಬರ ನಿರ್ಧಾರ ಅಲ್ಲ. ಸಂಪುಟ ಸಭೆಯಲ್ಲಿ ಒಬ್ಬೊಬ್ಬರು ವಿವಿಧ ಅಭಿಪ್ರಾಯ ನೀಡಿದ್ದಾರೆ. ಈ ಹೇಳಿಕೆಗಳ ಮೇಲೆ ಸುದೀರ್ಘ ಅಧ್ಯಯನ ಮಾಡಿದ ಮೇಲೆ ವೈಜ್ಞಾನಿಕ ಸಮೀಕ್ಷೆ ಅನ್ನಿಸುತ್ತಿದೆ ಎಂದು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ಇನ್ನು ಮುಂದುವರಿದು ಮಾತನಾಡಿದ ಅವರು, ಜಾತಿಗಣತಿ ವರದಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಮುಂದಿನ ತೀರ್ಮಾನ ಎಂದರು.

ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

10 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

10 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

11 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

14 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

14 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

15 hours ago