ರಾಜ್ಯ

ಸೆ.22ರಿಂದ ಅಕ್ಟೋಬರ್.‌7ರವರೆಗೆ ಜಾತಿಗಣತಿ ಮರು ಸಮೀಕ್ಷೆ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟು ಮಾಡಿದ್ದ ಹಿಂದುಳಿದ ವರ್ಗಗಳ ಆಯೋಗದ ವರದಿ ಕೈಬಿಟ್ಟ ಬೆನ್ನಲ್ಲೇ ಇದೀಗ ಸೆ.22ರಿಂದ ಅ.7ರವರೆಗೆ ಜಾತಿಗಣತಿ ಮರುಸಮೀಕ್ಷೆ ನಡೆಯಲಿದೆ.

ರಾಜ್ಯ ಶಾಶ್ವತ ಹಿಂದುಳಿದ ವರ್ಗ ಯೋಗದಿಂದ ಜಾತಿಗಣತಿ ಸಮೀಕ್ಷೆ ನಡೆಯಲಿದ್ದು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನೆಪದಲ್ಲಿ ಮತ್ತೆ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಆಯೋಗದಿಂದ ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಒಳ ಮೀಸಲಾತಿ ಸಮೀಕ್ಷೆ ಮಾದರಿಯಲ್ಲಿಯೇ ಜಾತಿಗಣತಿ ಸಮೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರ ಶಿಕ್ಷಕರ ಮೂಲಕ ಮನೆ ಮನೆ ಸರ್ವೆ ನಡೆಸಲು ಸರ್ಕಾರದ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸಮೀಕ್ಷೆಯಲ್ಲಿ ಒಟ್ಟು 1.65 ಲಕ್ಷ ಗಣತಿದಾರರನ್ನು ಬಳಸಿಕೊಳ್ಳಲಾಗುತ್ತದೆ. ಶಿಕ್ಷಕರ ಜೊತೆಗೆ ವಿವಿಧ ಇಲಾಖೆಗಳ ಸಿಬ್ಬಂದಿಗಳ ಜೊತೆಗೆ ಗ್ರಾಮ ಒನ್, ಬೆಂಗಳೂರು ಒನ್, ಸಕಾಲ ಸೇವಾಕೇಂದ್ರದ ಮೂಲಕ ಸಮೀಕ್ಷೆ ನಡೆಸಲಾಗುತ್ತದೆ.ಇದರ ಜೊತೆಗೆ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸಮೀಕ್ಷೆ ನಡೆಯಲಿದ್ದು, ರಾಜ್ಯದ ಏಳು ಕೋಟಿ ಜನರನ್ನು ಸಮೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ. ‌

ಹೀಗಾಗಿ ಸಮೀಕ್ಷೆ ಆರಂಭಕ್ಕೂ ಮುನ್ನವೇ ಎಚ್ಚೆತ್ತುಕೊಂಡಿರುವ ಸಮುದಾಯಗಳು, ಆಯಾಯ ಜಾತಿ, ಸಮುದಾಯದ ನಾಯಕರಿಂದ ಜಾಗೃತಿ ಸಭೆ, ವೀರಶೈವ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಸಮಾಜದ ನಾಯಕರಿಂದ ಸಭೆಗಳ ಮೇಲೆ ಸಭೆ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲಾವಾರು ಸಭೆ ನಡೆಸಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಚಿವರು, ಸಮುದಾಯದ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸುವಂತೆ ಸೂಚಿಸಿದ್ದಾರೆ. ಕಳೆದ ಬಾರಿಯಂತೆ ಗೊಂದಲ ಆಗದಂತೆ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದ್ದು, ಸಮುದಾಯಗಳಿಗೆ ಅನ್ಯಾಯವಾಗದಂತೆ ಪಕ್ಷಾತೀತವಾಗಿ ಎಲ್ಲಾ ಪಕ್ಷದ ಮುಖಂಡರು ಎಚ್ಚರಿಕೆ ವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

38 mins ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

5 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

8 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

8 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

9 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

13 hours ago