ರಾಯಚೂರು: ಸುಪ್ರೀಂಕೋರ್ಟ್ ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಜಾರಿಗೆ ತರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಈಗ ನೀಡಿರುವ ಜಾತಿಗಣತಿ ವರದಿ ಸಚಿವ ಸಂಪುಟ ಸಭೆ ಮತ್ತು ವರಿಷ್ಠರೊಂದಿಗೆ ಚರ್ಚಿಸಿ, ಅವುಗಳಲ್ಲಿ ದೋಷ ಕಂಡುಬಂದರೆ ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುವ ಕೆಲಸ ಮಾಡಲಾಗುವುದು. ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿನಿತ್ಯ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ರಾಜೀನಾಮೆ ಬೇಡಿದರೆ, ನಾನು ಅವರ ಬೇಡಿಕೆಯಂತೆ ರಾಜೀನಾಮೇ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಾಮಾನ್ಯ. ವಿರೋಧ ಪಕ್ಷಗಳ ನಾಯಕರು ಅದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಊಹಾಪೋಹಗಳ ಅವಶ್ಯಕತೆ ಇಲ್ಲ. ದಿನನಿತ್ಯ ನನ್ನ ಮೇಲೆ ಆರೋಪಗಳನ್ನು ಮಾಡಿದ್ದೇ ಆದಲ್ಲಿ ಆಗ ಮಾತ್ರ ನಮ್ಮ ಸರ್ಕಾರ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…