ರಾಜ್ಯ

ಜಾತಿಗಣತಿ ವರದಿಯಲ್ಲಿ ದೋಷಗಳಿದ್ದರೆ ಸಚಿವ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ರಾಯಚೂರು: ಸುಪ್ರೀಂಕೋರ್ಟ್‌ ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಜಾರಿಗೆ ತರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಈಗ ನೀಡಿರುವ ಜಾತಿಗಣತಿ ವರದಿ ಸಚಿವ ಸಂಪುಟ ಸಭೆ ಮತ್ತು ವರಿಷ್ಠರೊಂದಿಗೆ ಚರ್ಚಿಸಿ, ಅವುಗಳಲ್ಲಿ ದೋಷ ಕಂಡುಬಂದರೆ ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುವ ಕೆಲಸ ಮಾಡಲಾಗುವುದು. ಬಿಜೆಪಿ-ಜೆಡಿಎಸ್‌ ಪಕ್ಷಗಳು ಪ್ರತಿನಿತ್ಯ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ರಾಜೀನಾಮೆ ಬೇಡಿದರೆ, ನಾನು ಅವರ ಬೇಡಿಕೆಯಂತೆ ರಾಜೀನಾಮೇ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಾಮಾನ್ಯ. ವಿರೋಧ ಪಕ್ಷಗಳ ನಾಯಕರು ಅದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಊಹಾಪೋಹಗಳ ಅವಶ್ಯಕತೆ ಇಲ್ಲ. ದಿನನಿತ್ಯ ನನ್ನ ಮೇಲೆ ಆರೋಪಗಳನ್ನು ಮಾಡಿದ್ದೇ ಆದಲ್ಲಿ ಆಗ ಮಾತ್ರ ನಮ್ಮ ಸರ್ಕಾರ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

9 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

55 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago