ರಾಯಚೂರು: ಸುಪ್ರೀಂಕೋರ್ಟ್ ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಜಾರಿಗೆ ತರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಈಗ ನೀಡಿರುವ ಜಾತಿಗಣತಿ ವರದಿ ಸಚಿವ ಸಂಪುಟ ಸಭೆ ಮತ್ತು ವರಿಷ್ಠರೊಂದಿಗೆ ಚರ್ಚಿಸಿ, ಅವುಗಳಲ್ಲಿ ದೋಷ ಕಂಡುಬಂದರೆ ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುವ ಕೆಲಸ ಮಾಡಲಾಗುವುದು. ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿನಿತ್ಯ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ರಾಜೀನಾಮೆ ಬೇಡಿದರೆ, ನಾನು ಅವರ ಬೇಡಿಕೆಯಂತೆ ರಾಜೀನಾಮೇ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಾಮಾನ್ಯ. ವಿರೋಧ ಪಕ್ಷಗಳ ನಾಯಕರು ಅದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಊಹಾಪೋಹಗಳ ಅವಶ್ಯಕತೆ ಇಲ್ಲ. ದಿನನಿತ್ಯ ನನ್ನ ಮೇಲೆ ಆರೋಪಗಳನ್ನು ಮಾಡಿದ್ದೇ ಆದಲ್ಲಿ ಆಗ ಮಾತ್ರ ನಮ್ಮ ಸರ್ಕಾರ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…