ರಾಯಚೂರು: ಸುಪ್ರೀಂಕೋರ್ಟ್ ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಜಾರಿಗೆ ತರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಈಗ ನೀಡಿರುವ ಜಾತಿಗಣತಿ ವರದಿ ಸಚಿವ ಸಂಪುಟ ಸಭೆ ಮತ್ತು ವರಿಷ್ಠರೊಂದಿಗೆ ಚರ್ಚಿಸಿ, ಅವುಗಳಲ್ಲಿ ದೋಷ ಕಂಡುಬಂದರೆ ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುವ ಕೆಲಸ ಮಾಡಲಾಗುವುದು. ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿನಿತ್ಯ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ರಾಜೀನಾಮೆ ಬೇಡಿದರೆ, ನಾನು ಅವರ ಬೇಡಿಕೆಯಂತೆ ರಾಜೀನಾಮೇ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಾಮಾನ್ಯ. ವಿರೋಧ ಪಕ್ಷಗಳ ನಾಯಕರು ಅದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಊಹಾಪೋಹಗಳ ಅವಶ್ಯಕತೆ ಇಲ್ಲ. ದಿನನಿತ್ಯ ನನ್ನ ಮೇಲೆ ಆರೋಪಗಳನ್ನು ಮಾಡಿದ್ದೇ ಆದಲ್ಲಿ ಆಗ ಮಾತ್ರ ನಮ್ಮ ಸರ್ಕಾರ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…