ರಾಜ್ಯ

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ

ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ

ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ
ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago