ರಾಜ್ಯ

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ

ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ

ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ
ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

1 hour ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

1 hour ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

2 hours ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

4 hours ago