ರಾಜ್ಯ

ಹಗರಣ ಮರೆಮಾಚಲು ಜಾತಿ ಗಣತಿ ವರದಿ ಪ್ರಸ್ತಾಪ: ಅಶೋಕ್‌ ಆರೋಪ

ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ ಎಂಬ ಆರೋಪವಿದೆ

ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ,‌ ಮತ್ತೊಂದು ಕಡೆ ಲೋಕಾಯುಕ್ತ‌ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ ಎಂದರು.

ಜನಸಂಖ್ಯಾ ಗಣತಿ ಜೊತೆಗೆ ಜಾತಿ ಗಣತಿ ಮಾಡಬೇಕೆಂದು ಕಾಂಗ್ರೆಸ್ ಸಲಹೆ ನೀಡಿದೆ. 10 ವರ್ಷವಾಗುತ್ತಾ ಬಂದರೂ ಜಾತಿ ಗಣತಿ ವರದಿ ಬಿಡುಗಡೆಯಾಗಿಲ್ಲ. ಆದರೂ ಇವರು ಪ್ರಧಾನಿಗೆ ಸಲಹೆ ‌ನೀಡಲು ಮುಂದಾಗಿದ್ದಾರೆ. ಶಾಮನೂರು ಶಿವಶಂಕರಪ್ಪ, ಡಾ.ಸುಧಾಕರ್, ಡಿ.ಕೆ.ಶಿವಕುಮಾರ್ ‌ಮೊದಲಾದವರು ಈ ವರದಿ ಬಿಡುಗಡೆಗೆ ವಿರೋಧ ಸೂಚಿಸಿದ್ದಾರೆ. ಕಾಂಗ್ರೆಸ್‌‌ನಲ್ಲಿನ ಗೊಂದಲ ಬಗೆಹರಿಸುವುದು ಬಿಟ್ಟು ಬಿಜೆಪಿ ‌ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಸಿಎಂ ಬದಲಾವಣೆ

ಮುಖ್ಯಮಂತ್ರಿ ‌ಬದಲಾವಣೆ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ. ಬೆಳಗಾವಿಯ ಸಚಿವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೋಡ್ ಶೋ ನಡೆಸುತ್ತಿದ್ದಾರೆ. ಡಾ.ಜಿ.ಪರಮೇಶ್ವರ್ ಮತ್ತಿತರರು ಕೂಡ ಸಿಎಂ‌ ಆಗಲು ಯತ್ನಿಸುತ್ತಿದ್ದಾರೆ. ಪಕ್ಷದ ವಿರುದ್ಧ ಮಾತಾಡಿದರೆ ನೋಟಿಸ್ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದು, ಅದಕ್ಕೆ ಯಾರೂ ಕ್ಯಾರೇ ಎನ್ನುತ್ತಿಲ್ಲ. ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದರು.

ಒಳ ಮೀಸಲಾತಿ ತರಲಿ

ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಈ ಕುರಿತು ಪ್ರಯತ್ನ ಮಾಡಿತ್ತು. ಮೀಸಲು ಪ್ರಮಾಣವನ್ನು ಪರಿಶಿಷ್ಟ ಜಾತಿಗೆ 3% ರಿಂದ 7% ಕ್ಕೆ ಏರಿಸಲಾಗಿತ್ತು. ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ನೀಡಿದ್ದೇ ಬಿಜೆಪಿ. ದಲಿತರು, ಹಿಂದುಳಿದವರ ಚಾಂಪಿಯನ್‌ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಹರ್ಯಾಣ ಚುನಾವಣೆಯಲ್ಲಿ ಸೋತಿದೆ. ಬಿಜೆಪಿ ಎಂದಿಗೂ ಮೀಸಲು ವಿಚಾರದಲ್ಲಿ ಹಿಂದುಳಿದಿಲ್ಲ. ದಲಿತರ ಅಭಿವೃದ್ಧಿಗೆ ಬಿಜೆಪಿ ಸದಾ ಶ್ರಮಿಸಿದೆ. ದಲಿತರ ಪರವಾಗಿ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ ಎನ್ನುವುದಾದರೆ ಒಳ ಮೀಸಲಾತಿ ತರಲಿ ಎಂದರು.

ಕಾಂಗ್ರೆಸ್‌ನಲ್ಲಿ ಯಾವುದೇ ನಾಯಕರು ಯಾರದ್ದೇ ಮಾತು ಕೇಳುತ್ತಿಲ್ಲ. ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲ ನಾಯಕರು ಈ ಸಮಯದಲ್ಲೇ ಮಠ, ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿಸುತ್ತಿದ್ದಾರೆ. ಎಲ್ಲರೂ ಸಿಎಂ ಆಗಲು ದೇವರ ಮೊರೆ ಹೋಗಿದ್ದಾರೆ. ಸತೀಶ್‌ ಜಾರಕಿಹೊಳಿ ಸ್ಮಶಾನಕ್ಕೂ ಹೋಗಿ ಪೂಜೆ ಮಾಡುತ್ತಾರೆ. ಹಿಂದೂ ಧರ್ಮದ ಮೇಲೆ ನಂಬಿಕೆಯೇ ಇಲ್ಲದ ಇವರೆಲ್ಲರೂ ಈಗಲೇ ಪೂಜೆ ಮಾಡಲಾರಂಭಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಕಾಂಗ್ರೆಸ್‌ನ ಎಲ್ಲ ಶಾಸಕರಿಗೆ ಗೊತ್ತಾಗಿದೆ. ಇಂತಹ ಸಮಯದಲ್ಲಿ ಅಭಿವೃದ್ಧಿಯ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಒಂದೇ ಒಂದು ಅಭಿವೃದ್ಧಿ ಕೆಲಸ ನಡೆದಿಲ್ಲ. ಆಸ್ಪತ್ರೆಗೆ ಔಷಧಿ ಇಲ್ಲ, ಶಾಲೆಗಳ ಅಭಿವೃದ್ಧಿ ನಡೆಯುತ್ತಿಲ್ಲ, ನೀರಾವರಿ ಯೋಜನೆಗಳು ಜಾರಿಯಾಗುತ್ತಿಲ್ಲ. ಹಗರಣಗಳು ಬಿಟ್ಟರೆ ಇಲ್ಲಿ ಬೇರೇನೂ ಇಲ್ಲ. ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

4 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

5 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

6 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

7 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

11 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

11 hours ago