ರಾಜ್ಯ

ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ (Caste Census) ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಟಾನ ಮಾಡದೇ ಅದನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ ವರದಿಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ವರದಿಯು ಮೂಲಭೂತವಾಗಿ ದೋಷಪೂರಿತವಾಗಿದೆ ಮತ್ತು ರಾಜ್ಯದ ಜನಸಂಖ್ಯಾ ವಾಸ್ತವತೆಯನ್ನು ಪ್ರತಿಬಿಂಬಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಯೋಗದ ಪ್ರಕಾರ, ಸಮೀಕ್ಷೆಯನ್ನು ಏಪ್ರಿಲ್ 11, 2015 ಮತ್ತು ಮೇ 30, 2015ರ ನಡುವೆ 5.9 ಕೋಟಿ ಜನಸಂಖ್ಯೆಯನ್ನು ಒಳಗೊಳ್ಳಲು ಕೇವಲ 50 ದಿನಗಳ ಅಲ್ಪಾವಧಿಯಲ್ಲಿ ನಡೆಸಲಾಗಿದೆ. ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಸಂಪೂರ್ಣತೆಯ ಮೇಲೆ ಗಂಭೀರವಾದ ಅನುಮಾನವನ್ನು ಉಂಟುಮಾಡುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ವಿವಿಧ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶಗಳಲ್ಲಿ ಅತ್ಯಂತ ಎದ್ದುಕಾಣುವ ವ್ಯತ್ಯಾಸಗಳಲ್ಲಿ ಒಂದಾಗಿದೆ. ಉದಾಹರಣೆಗೆ, ವೀರಶೈವ ಲಿಂಗಾಯತ ಜನಸಂಖ್ಯೆಯು ಕೇವಲ 30 ಲಕ್ಷ ಎಂದು ವರದಿ ಹೇಳುತ್ತದೆ, ಆದರೆ ವಿಶ್ವಾಸಾರ್ಹ ಅಂದಾಜಿನ ಪ್ರಕಾರ ಸಂಖ್ಯೆ 1.25 ಕೋಟಿ ಮೀರಿದೆ. ಅಂತಹ ಕಡಿಮೆ ಪ್ರಾತಿನಿಧ್ಯವು ದತ್ತಾಂಶ ಸಂಗ್ರಹವನ್ನು ವೈಜ್ಞಾನಿಕ ಅಥವಾ ವ್ಯವಸ್ಥಿತ ರೀತಿಯಲ್ಲಿ ನಡೆಸಲಾಗಿಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇಂದು ಸಂಪುಟ ಸಭೆ:-
ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಹೆಚ್ಚಿ ಮಾಹಿತಿಗೆ: -ಇಂದೇ ಜಾತಿ ಗಣತಿ ಕ್ಲೈಮ್ಯಾಕ್ಸ್:‌ ಸಂಜೆ 4ಕ್ಕೆ ಸಚಿವ ಸಂಪುಟ ಸಭೆ

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಆಂದೋಲನ ಡೆಸ್ಕ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago