ರಾಜ್ಯ

ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ (Caste Census) ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಟಾನ ಮಾಡದೇ ಅದನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ ವರದಿಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ವರದಿಯು ಮೂಲಭೂತವಾಗಿ ದೋಷಪೂರಿತವಾಗಿದೆ ಮತ್ತು ರಾಜ್ಯದ ಜನಸಂಖ್ಯಾ ವಾಸ್ತವತೆಯನ್ನು ಪ್ರತಿಬಿಂಬಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಯೋಗದ ಪ್ರಕಾರ, ಸಮೀಕ್ಷೆಯನ್ನು ಏಪ್ರಿಲ್ 11, 2015 ಮತ್ತು ಮೇ 30, 2015ರ ನಡುವೆ 5.9 ಕೋಟಿ ಜನಸಂಖ್ಯೆಯನ್ನು ಒಳಗೊಳ್ಳಲು ಕೇವಲ 50 ದಿನಗಳ ಅಲ್ಪಾವಧಿಯಲ್ಲಿ ನಡೆಸಲಾಗಿದೆ. ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಸಂಪೂರ್ಣತೆಯ ಮೇಲೆ ಗಂಭೀರವಾದ ಅನುಮಾನವನ್ನು ಉಂಟುಮಾಡುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ವಿವಿಧ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶಗಳಲ್ಲಿ ಅತ್ಯಂತ ಎದ್ದುಕಾಣುವ ವ್ಯತ್ಯಾಸಗಳಲ್ಲಿ ಒಂದಾಗಿದೆ. ಉದಾಹರಣೆಗೆ, ವೀರಶೈವ ಲಿಂಗಾಯತ ಜನಸಂಖ್ಯೆಯು ಕೇವಲ 30 ಲಕ್ಷ ಎಂದು ವರದಿ ಹೇಳುತ್ತದೆ, ಆದರೆ ವಿಶ್ವಾಸಾರ್ಹ ಅಂದಾಜಿನ ಪ್ರಕಾರ ಸಂಖ್ಯೆ 1.25 ಕೋಟಿ ಮೀರಿದೆ. ಅಂತಹ ಕಡಿಮೆ ಪ್ರಾತಿನಿಧ್ಯವು ದತ್ತಾಂಶ ಸಂಗ್ರಹವನ್ನು ವೈಜ್ಞಾನಿಕ ಅಥವಾ ವ್ಯವಸ್ಥಿತ ರೀತಿಯಲ್ಲಿ ನಡೆಸಲಾಗಿಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇಂದು ಸಂಪುಟ ಸಭೆ:-
ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಹೆಚ್ಚಿ ಮಾಹಿತಿಗೆ: -ಇಂದೇ ಜಾತಿ ಗಣತಿ ಕ್ಲೈಮ್ಯಾಕ್ಸ್:‌ ಸಂಜೆ 4ಕ್ಕೆ ಸಚಿವ ಸಂಪುಟ ಸಭೆ

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago