ರಾಜ್ಯ

ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ (Caste Census) ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಟಾನ ಮಾಡದೇ ಅದನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ ವರದಿಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ವರದಿಯು ಮೂಲಭೂತವಾಗಿ ದೋಷಪೂರಿತವಾಗಿದೆ ಮತ್ತು ರಾಜ್ಯದ ಜನಸಂಖ್ಯಾ ವಾಸ್ತವತೆಯನ್ನು ಪ್ರತಿಬಿಂಬಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಯೋಗದ ಪ್ರಕಾರ, ಸಮೀಕ್ಷೆಯನ್ನು ಏಪ್ರಿಲ್ 11, 2015 ಮತ್ತು ಮೇ 30, 2015ರ ನಡುವೆ 5.9 ಕೋಟಿ ಜನಸಂಖ್ಯೆಯನ್ನು ಒಳಗೊಳ್ಳಲು ಕೇವಲ 50 ದಿನಗಳ ಅಲ್ಪಾವಧಿಯಲ್ಲಿ ನಡೆಸಲಾಗಿದೆ. ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಸಂಪೂರ್ಣತೆಯ ಮೇಲೆ ಗಂಭೀರವಾದ ಅನುಮಾನವನ್ನು ಉಂಟುಮಾಡುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ವಿವಿಧ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶಗಳಲ್ಲಿ ಅತ್ಯಂತ ಎದ್ದುಕಾಣುವ ವ್ಯತ್ಯಾಸಗಳಲ್ಲಿ ಒಂದಾಗಿದೆ. ಉದಾಹರಣೆಗೆ, ವೀರಶೈವ ಲಿಂಗಾಯತ ಜನಸಂಖ್ಯೆಯು ಕೇವಲ 30 ಲಕ್ಷ ಎಂದು ವರದಿ ಹೇಳುತ್ತದೆ, ಆದರೆ ವಿಶ್ವಾಸಾರ್ಹ ಅಂದಾಜಿನ ಪ್ರಕಾರ ಸಂಖ್ಯೆ 1.25 ಕೋಟಿ ಮೀರಿದೆ. ಅಂತಹ ಕಡಿಮೆ ಪ್ರಾತಿನಿಧ್ಯವು ದತ್ತಾಂಶ ಸಂಗ್ರಹವನ್ನು ವೈಜ್ಞಾನಿಕ ಅಥವಾ ವ್ಯವಸ್ಥಿತ ರೀತಿಯಲ್ಲಿ ನಡೆಸಲಾಗಿಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇಂದು ಸಂಪುಟ ಸಭೆ:-
ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಹೆಚ್ಚಿ ಮಾಹಿತಿಗೆ: -ಇಂದೇ ಜಾತಿ ಗಣತಿ ಕ್ಲೈಮ್ಯಾಕ್ಸ್:‌ ಸಂಜೆ 4ಕ್ಕೆ ಸಚಿವ ಸಂಪುಟ ಸಭೆ

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಆಂದೋಲನ ಡೆಸ್ಕ್

Recent Posts

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

28 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

58 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

1 hour ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

2 hours ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago