ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.
ಇನ್ನು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಶೇ.95ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…