ರಾಜ್ಯ

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ‌ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್‌ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

ಇನ್ನು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಶೇ.95ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

7 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

7 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

7 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

7 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago