ರಾಜ್ಯ

ನಿಗದಿಯಂತೆ ಸೆಪ್ಟೆಂಬರ್.‌22ರಿಂದ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಹಿನ್ನೆಲೆ ಸಮೀಕ್ಷೆಯು ನಿಗದಿಯಂತೆ ಇದೇ ತಿಂಗಳ.22ರಿಂದ ಆರಂಭವಾಗಲಿದ್ದು, ಆವರಿಸಿದ್ದ ಕಾರ್ಮೋಡಗಳು ತೆರೆಗೆ ಸರಿದಿದೆ.

ಸಮೀಕ್ಷೆಗೆ ಕೆಲವು ಸಚಿವರೇ ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸೋಮವಾರದಿಂದ ನಡೆಸಲು ಉದ್ದೇಶಿಸಿದ ಸಮೀಕ್ಷೆಯೇ ಡೋಲಾಯಮಾನವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟದ ಸಹದ್ಯೋಗಿಗಳ ಜೊತೆ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ ನಿಗದಿತ ದಿನದಂದೇ ನಡೆಸಲು ನಿರ್ಧರಿಸಲಾಯಿತು.

ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಿದ್ದು, ಈಗಾಗಲೇ ನಿಗದಿಯಾಗಿರುವಂತೆ 22ರಿಂದ ಶೈಕ್ಷಣಕ, ಸಾಮಾಜಿಕ ಸ್ಥಿತಿಗತಿ ಸಮೀಕ್ಷೆ ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸ್ವಾಯತ್ತ ಸಂಸ್ಥೆ ಇದರಲ್ಲಿನಾವು ಹಸ್ತಕ್ಷೇಪ ಮಾಡಲು ಬರುವುದಿಲ್ಲ. ತೀರ್ಮಾನವಾದ ಮೇಲೆ ಮುಂದೂಡಿ ಎಂದು ಹೇಳಲು ಹೇಗೆ ಸಾಧ್ಯ? ಯಾರು ಏನೇ ಹೇಳಿಕೊಂಡರೂ ನಿಗದಿತ ದಿನಾಂಕದಂದೇ ನಡೆಯಲಿದೆ ಎಂದು ತಿಳಿಸಿದರು.

ಸಮೀಕ್ಷೆ ಬಗ್ಗೆ ಸಚಿವರು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಕೆಲವರನ್ನು ಸ್ಪಷ್ಟನೆಯನ್ನು ಮಾತ್ರ ಕೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗವು ಅವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಎಚ್ಚರಿಸಿದೆ.

ಬಿಜೆಪಿಯವರು ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾವುದೇ ಕಾರಣಕ್ಕೂ ಮುಂದೂಡುವ ಪ್ರಶ್ನೆಯೇ ಇಲ್ಲ. ಇದಕ್ಕೆ ಆಯೋಗವು ಈಗಾಗಲೇ ಅಗತ್ಯವಾದ ಸಿದ್ದತೆಯನ್ನು ಕೈಗೊಂಡಿದೆ ಎಂದು ಸಿಎಂ ಹೇಳಿದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

9 mins ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

8 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

8 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

13 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago