9-10 Hour Workday for Labourers | Will Not Accept Centre’s Proposal
ಬೆಂಗಳೂರು: ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಪ್ರಮುಖ ಉದ್ದೇಶ ಹೊಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಸಮಯಕ್ಕೆ ಶುರುವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆಯ ಬಳಿಕ ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆಗಳಿವೆ ಎಂಬ ವದಂತಿಗಳಿದ್ದವು. ಇದಕ್ಕೆ ತೆರೆ ಎಳೆದಿರುವ ಸಚಿವ ಸಂತೋಷ ಲಾಡ್, ಸಂಪುಟದ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳು ಇಲ್ಲ. ಸೆ.22ರಿಂದಲೇ ಸಮೀಕ್ಷೆ ನಡೆಯಲಿವೆ ಎಂದಿದ್ದಾರೆ.
ಮಾಧ್ಯಮಗಳಲ್ಲಿ ಅನಗತ್ಯವಾದ ವದಂತಿಗಳನ್ನು ಸೃಷ್ಟಿಸಲಾಗುತ್ತಿದೆ. ಸಚಿವ ಸಂಪುಟಸಭೆಯಲ್ಲಿ ಯಾರು ಮೇಜು ಕುಟ್ಟಿ ಪ್ರಶ್ನೆ ಮಾಡಿಲ್ಲ, ರಾಜ್ಯ ಸರ್ಕಾರದ ನಡೆಸುತ್ತಿರುವುದು ಜಾತಿ ಜನಗಣತಿಯನ್ನಲ್ಲ. ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾತ್ರ ಎಂದು ಹೇಳಿದರು.
ಹೆಚ್ಚುವರಿಯಾಗಿ 331 ಜಾತಿಗಳ ಬಗ್ಗೆ ಪ್ರಮುಖವಾಗಿ ಪ್ರಶ್ನೆಗಳು ಎದ್ದಿವೆ. ಈ ಹಿಂದೆ ಕಾಂತರಾಜು ಆಯೋಗದಲ್ಲಿ ಇಲ್ಲದೆ ಇರುವ ಜಾತಿಗಳು ಈಗ ಎಲ್ಲಿಂದ ಬಂದಿವೆ ಎಂಬ ಪ್ರಶ್ನೆ ಹಾಕಲಾಗುತ್ತಿದೆ. ಇತ್ತೀಚೆಗೆ ಹಿಂದುಳಿದ ವರ್ಗಗಳ ಆಕ್ಷೇಪಣೆಗಳನ್ನು ಆಹ್ವಾನಿಸಿದಾಗ ಬಹಳಷ್ಟು ಮಂದಿ ಉಪಜಾತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅದನ್ನು ಆಧರಿಸಿ ಸಮೀಕ್ಷೆಯ ಕಾಲಂಗಳನ್ನು ಸೇರಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಹೊಸ ಜಾತಿಗಳು ಸೇರ್ಪಡೆಯಾಗಿವೆ ಎಂದು ಅರ್ಥವಲ್ಲ ಎಂದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…