ರಾಜ್ಯ

ನಿಗದಿತ ಸಮಯಕ್ಕೆ ಶುರುವಾಗಲಿದೆ ಜಾತಿಗಣತಿ ಸಮೀಕ್ಷೆ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಪ್ರಮುಖ ಉದ್ದೇಶ ಹೊಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಸಮಯಕ್ಕೆ ಶುರುವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆಯ ಬಳಿಕ ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆಗಳಿವೆ ಎಂಬ ವದಂತಿಗಳಿದ್ದವು. ಇದಕ್ಕೆ ತೆರೆ ಎಳೆದಿರುವ ಸಚಿವ ಸಂತೋಷ ಲಾಡ್, ಸಂಪುಟದ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳು ಇಲ್ಲ. ಸೆ.22ರಿಂದಲೇ ಸಮೀಕ್ಷೆ ನಡೆಯಲಿವೆ ಎಂದಿದ್ದಾರೆ.

ಮಾಧ್ಯಮಗಳಲ್ಲಿ ಅನಗತ್ಯವಾದ ವದಂತಿಗಳನ್ನು ಸೃಷ್ಟಿಸಲಾಗುತ್ತಿದೆ. ಸಚಿವ ಸಂಪುಟಸಭೆಯಲ್ಲಿ ಯಾರು ಮೇಜು ಕುಟ್ಟಿ ಪ್ರಶ್ನೆ ಮಾಡಿಲ್ಲ, ರಾಜ್ಯ ಸರ್ಕಾರದ ನಡೆಸುತ್ತಿರುವುದು ಜಾತಿ ಜನಗಣತಿಯನ್ನಲ್ಲ. ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾತ್ರ ಎಂದು ಹೇಳಿದರು.

ಹೆಚ್ಚುವರಿಯಾಗಿ 331 ಜಾತಿಗಳ ಬಗ್ಗೆ ಪ್ರಮುಖವಾಗಿ ಪ್ರಶ್ನೆಗಳು ಎದ್ದಿವೆ. ಈ ಹಿಂದೆ ಕಾಂತರಾಜು ಆಯೋಗದಲ್ಲಿ ಇಲ್ಲದೆ ಇರುವ ಜಾತಿಗಳು ಈಗ ಎಲ್ಲಿಂದ ಬಂದಿವೆ ಎಂಬ ಪ್ರಶ್ನೆ ಹಾಕಲಾಗುತ್ತಿದೆ. ಇತ್ತೀಚೆಗೆ ಹಿಂದುಳಿದ ವರ್ಗಗಳ ಆಕ್ಷೇಪಣೆಗಳನ್ನು ಆಹ್ವಾನಿಸಿದಾಗ ಬಹಳಷ್ಟು ಮಂದಿ ಉಪಜಾತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅದನ್ನು ಆಧರಿಸಿ ಸಮೀಕ್ಷೆಯ ಕಾಲಂಗಳನ್ನು ಸೇರಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಹೊಸ ಜಾತಿಗಳು ಸೇರ್ಪಡೆಯಾಗಿವೆ ಎಂದು ಅರ್ಥವಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

2 mins ago

ಓದುಗರ ಪತ್ರ: ಯುದ್ಧ-ಬುದ್ಧ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…

20 mins ago

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…

24 mins ago

ಓದುಗರ ಪತ್ರ: ಲಿಂಗಾಂಬುಧಿ ಕೆರೆ ಏರಿ ಬೀದಿ ದೀಪ ಸರಿಪಡಿಸಿ

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…

27 mins ago

ಓದುಗರ ಪತ್ರ: ಕಿಸಾನ್ ಸಮಾನ್ ಸರ್ವರ್ ಸಮಸ್ಯೆ ನಿವಾರಿಸಿ

ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…

29 mins ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಿ

ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ…

32 mins ago