ರಾಜ್ಯ

ನಿಗದಿತ ಸಮಯಕ್ಕೆ ಶುರುವಾಗಲಿದೆ ಜಾತಿಗಣತಿ ಸಮೀಕ್ಷೆ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಪ್ರಮುಖ ಉದ್ದೇಶ ಹೊಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಸಮಯಕ್ಕೆ ಶುರುವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆಯ ಬಳಿಕ ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆಗಳಿವೆ ಎಂಬ ವದಂತಿಗಳಿದ್ದವು. ಇದಕ್ಕೆ ತೆರೆ ಎಳೆದಿರುವ ಸಚಿವ ಸಂತೋಷ ಲಾಡ್, ಸಂಪುಟದ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳು ಇಲ್ಲ. ಸೆ.22ರಿಂದಲೇ ಸಮೀಕ್ಷೆ ನಡೆಯಲಿವೆ ಎಂದಿದ್ದಾರೆ.

ಮಾಧ್ಯಮಗಳಲ್ಲಿ ಅನಗತ್ಯವಾದ ವದಂತಿಗಳನ್ನು ಸೃಷ್ಟಿಸಲಾಗುತ್ತಿದೆ. ಸಚಿವ ಸಂಪುಟಸಭೆಯಲ್ಲಿ ಯಾರು ಮೇಜು ಕುಟ್ಟಿ ಪ್ರಶ್ನೆ ಮಾಡಿಲ್ಲ, ರಾಜ್ಯ ಸರ್ಕಾರದ ನಡೆಸುತ್ತಿರುವುದು ಜಾತಿ ಜನಗಣತಿಯನ್ನಲ್ಲ. ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾತ್ರ ಎಂದು ಹೇಳಿದರು.

ಹೆಚ್ಚುವರಿಯಾಗಿ 331 ಜಾತಿಗಳ ಬಗ್ಗೆ ಪ್ರಮುಖವಾಗಿ ಪ್ರಶ್ನೆಗಳು ಎದ್ದಿವೆ. ಈ ಹಿಂದೆ ಕಾಂತರಾಜು ಆಯೋಗದಲ್ಲಿ ಇಲ್ಲದೆ ಇರುವ ಜಾತಿಗಳು ಈಗ ಎಲ್ಲಿಂದ ಬಂದಿವೆ ಎಂಬ ಪ್ರಶ್ನೆ ಹಾಕಲಾಗುತ್ತಿದೆ. ಇತ್ತೀಚೆಗೆ ಹಿಂದುಳಿದ ವರ್ಗಗಳ ಆಕ್ಷೇಪಣೆಗಳನ್ನು ಆಹ್ವಾನಿಸಿದಾಗ ಬಹಳಷ್ಟು ಮಂದಿ ಉಪಜಾತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅದನ್ನು ಆಧರಿಸಿ ಸಮೀಕ್ಷೆಯ ಕಾಲಂಗಳನ್ನು ಸೇರಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಹೊಸ ಜಾತಿಗಳು ಸೇರ್ಪಡೆಯಾಗಿವೆ ಎಂದು ಅರ್ಥವಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

13 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

17 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

22 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

33 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

38 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

44 mins ago