ಬೆಂಗಳೂರು: ರಾಜ್ಯಾದ್ಯಂತ ಇಂದನಿಂದ ಜಾತಿಗಣತಿ ಸರ್ವೇ ಕಾರ್ಯ ಚುರುಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ಕಾಂತರಾಜು ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಮೀಕ್ಷೆಯಲ್ಲಿ ಪೂರ್ಣ ಪ್ರಮಾಣದ ಮಾಹಿತಿ ಕಲೆ ಹಾಕಿರಲಿಲ್ಲ. ಆಯೋಗ ನೀಡಿದ್ದ ಸೂಚನೆಗಳನ್ನು ಸರಿಯಾಗಿ ಪಾಲಿಸಿರಲಿಲ್ಲ. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿತ್ತು. ಕೊನೆಗೆ ಆ ವರದಿ ಅಂಗೀಕರಿಸಲು ಆಗದೆ, ಬಿಡಲೂ ಆಗದೇ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಸ್ತುತ ನಡೆಯುತ್ತಿರುವ ಸಮೀಕ್ಷೆಯನ್ನು ಕರಾರುವಕ್ಕಾಗಿ ಹಾಗೂ ಕಾನೂನಾತಕವಾಗಿ ನಡೆಸಬೇಕು. ಪ್ರತಿಹಂತದಲ್ಲೂ ಸಮೀಕ್ಷಾದಾರರು ಮಾಹಿತಿ ಸಂಗ್ರಹದ ದಸ್ತಾವೇಜುಗಳಿಗೆ ಸಹಿ ಹಾಕಿ, ಅಧಿಕೃತಗೊಳಿಸಬೇಕು. ಯಾವುದು ಅನಧಿಕೃತ ಹಾಗೂ ಆಧಾರರಹಿತ ಎಂಬ ಸನ್ನಿವೇಶ ಸೃಷ್ಟಿಯಾಗಬಾರದು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಕೆಲವು ಅಧಿಕಾರಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಮೊಬೈಲ್ ಬಳಕೆಗೆ ತಾಂತ್ರಿಕವಾದ ಸಾಮಥ್ರ್ಯವಿಲ್ಲವೆಂಬ ನೆಪ ಒಡ್ಡುತ್ತಿದ್ದು ಅಂಥವರ ಪಟ್ಟಿಯನ್ನು ಪಡೆದು ಸೂಕ್ತ ಪರಿಶೀಲನೆ ನಡೆಸಿ ನಂತರ ವಿನಾಯಿತಿ ನೀಡಿ ಪರ್ಯಾಯ ಸಮೀಕ್ಷಾದಾರರನ್ನು ನಿಯೋಜಿಸಬೇಕೆಂದು ತಾಕೀತು ಮಾಡಿದ್ದಾರೆ.
ಇದನ್ನು ಓದಿ : ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್
ಸಮೀಕ್ಷೆಗೆ ಆರಂಭಿಕ ಹಂತದಲ್ಲಿ ತೀವ್ರ ಹಿನ್ನಡೆಯಾಗಿದ್ದು, ಇದೇ ವೇಗದಲ್ಲಿ ಗಣತಿ ನಡೆದರೆ ಒಂದು ತಿಂಗಳಾದರೂ ಪೂರ್ಣಗೊಳ್ಳುವುದಿಲ್ಲ. ಪ್ರತಿ ದಿನ ಸರಾಸರಿ 10 ಲಕ್ಷ ಮನೆಗಳಂತೆ ಸಮೀಕ್ಷೆ ನಡೆಯಬೇಕಿತ್ತು. ಅದರ ಅಂದಾಜಿನ ಪ್ರಕಾರ ಸರಿಸುಮಾರು ಕನಿಷ್ಠ 50 ಲಕ್ಷ ಮನೆಗಳ ಸಮೀಕ್ಷೆಯಾಗಬೇಕಿತ್ತು. ಆದರೆ 5 ಲಕ್ಷ ಮನೆಗಳ ಸಮೀಕ್ಷೆಯೂ ಪೂರ್ಣವಾಗಿಲ್ಲ ಎಂದು ಮುಖ್ಯಮಂತ್ರಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಜಾತಿಗಣತಿ ಸರ್ವೇ ಕಾರ್ಯ ಕುಂಠಿತವಾಗಿತ್ತು. ಇಂದಿನಿಂದ ಜಾತಿ ಗಣತಿ ಸರ್ವೇ ಕಾರ್ಯ ಚುರುಕಾಗಲಿದೆ. ಈ ಸಂಬಂಧ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಹೇಳುವ ಪ್ರಕಾರ ಶೇಕಡಾ.90ರಷ್ಟು ತಾಂತ್ರಿಕ ಸಮಸ್ಯೆ ಪರಿಹಾರ ಆಗಿದೆ. ಸರ್ವೇಗೆ ಏನೆಲ್ಲಾ ತೊಡಗು ಇವೆ ಅದನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…