ರಾಜ್ಯ

ಸೆಪ್ಟೆಂಬರ್.22ರಿಂದ ಅಕ್ಟೋಬರ್ 7ರವರೆಗೆ ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಜಾತಿಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್ ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕ್ರಿಶ್ಚಿಯನ್ನರು ಹಾಗೂ ಮುಸಲ್ಮಾನರನ್ನು ಸೇರಿಸಿದಂತೆ ಅಲ್ಪಸಂಖ್ಯಾತರು ಭಾರತದ ಪ್ರಜೆಗಳೇ. ಸಮೀಕ್ಷೆಗೆ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಿದ್ದು, ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ಅವರು ರಾಜ್ಯದ ಪ್ರತಿ ಮನೆಗೂ ತೆರಳಿ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ಕಳೆದ ಬಾರಿಗಿಂತ 40 ಸಾವಿರ ಶಿಕ್ಷಕರನ್ನು ಹೆಚ್ಚಾಗಿ ನಿಯೋಜಿಸಲಾಗಿದೆ ಎಂದರು.

ಇದನ್ನು ಓದಿ : ಒಳ ಮೀಸಲಾತಿ: ಅತಿ ಸೂಕ್ಷ್ಮ ಜಾತಿಗಳನ್ನೂ ತಲುಪುವುದು ಅಗತ್ಯ

ಇನ್ನು ಜಾತಿ ಸಮೀಕ್ಷೆ ನಮೂನೆಯಲ್ಲಿ ‘ನಾಸ್ತಿಕ’ ಕಾಲಂ ಅನ್ನು ಸೇರಿಸಿರುವ ಬಗ್ಗೆ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿಯ ಬಗ್ಗೆ ಸರ್ಕಾರ ತಿಳಿಯಬೇಕಾಗಿದೆ. ಸಮೀಕ್ಷೆ ವರದಿ ಬಂದ ನಂತರ, ಅದರಂತೆ ಸರ್ಕಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆಂಬ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ಇನ್ನು ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಅಂತಿಮ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಈ ಬಗ್ಗೆ ರಾಜ್ಯಸರ್ಕಾರ ಕೇವಲ ಶಿಫಾರಸ್ಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ಸಹ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದರು.

ಇನ್ನು ಅನ್ನಭಾಗ್ಯದ ಅಕ್ಕಿ ಹೊರದೇಶಕ್ಕೆ ರಫ್ತಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

21 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

44 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

1 hour ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago