ರಾಜ್ಯ

ಜಾತಿ ಸಮೀಕ್ಷೆ | ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖ ಕೈಬಿಡಲಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಈ ವಿಷಯದಲ್ಲಿ “ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದರು.

ಉಪಜಾತಿ ವರ್ಗದಲ್ಲಿ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದರು.

ಮತ್ತಷ್ಟು ಸ್ಪಷ್ಟಪಡಿಸುತ್ತಾ, “ಅದನ್ನು ತೆಗೆದುಹಾಕಿದ್ದು ನಾನಲ್ಲ. ಹಿಂದುಳಿದ ವರ್ಗಗಳ ಆಯೋಗ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಿದ್ದಾರೆ ಎಂದರು.

ಬಿಜೆಪಿ ನಾಯಕರು ಸಲ್ಲಿಸಿದ ಪತ್ರವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಮಗೆ ಕಳುಹಿಸಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನು ಹೇಳಿದ್ದು ರಾಜ್ಯಪಾಲರಲ್ಲ. ನಾನು ಪತ್ರವನ್ನು ನೋಡಿದ್ದೇನೆ. ಬಿಜೆಪಿ ರಾಜಕೀಯ ಕಾರಣಗಳಿಗಾಗಿ ಇದನ್ನು ಮಾಡುತ್ತಿದೆ. ನಾನು ಬಿಜೆಪಿಗೆ ಉತ್ತರಗಳನ್ನು ನೀಡುತ್ತಲೇ ಇರಬೇಕೇ? ಎಂದು ಸಿಎಂ ಪ್ರಶ್ನಿಸಿದರು.

ಕಾಂಗ್ರೆಸ್ ಜಾತಿಗಳನ್ನು ವಿಭಜಿಸುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನಾವು ಯಾವಾಗ ಜಾತಿಗಳನ್ನು ಒಡೆದಿದ್ದೇವೆ? ಸರ್ಕಾರ ನಿಮ್ಮ(ಜನರ) ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಅದನ್ನು ತಿಳಿಯದೆ ನಾವು ನಿಮಗಾಗಿ ನೀತಿಗಳನ್ನು ಹೇಗೆ ರೂಪಿಸಬಹುದು? ಎಂದು ಪ್ರಶ್ನಿಸಿದರು.

ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಈ ಸಮೀಕ್ಷೆ ಒಂದು ಪಿತೂರಿ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರದ ಸಹ ಜಾತಿ ಜನಗಣತಿ ನಡೆಸುತ್ತಿದೆ. ಅದನ್ನು ಸಹ ಪಿತೂರಿ ಎಂದು ಪರಿಗಣಿಸಬಹುದೇ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರವೂ ಜಾತಿಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ ಷಡ್ಯಂತ್ರವಿರಲಿದೆಯೇ? ಸಮೀಕ್ಷೆಗೆ ಯಾವುದೇ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಸಮಾಜದಲ್ಲಿ ಸಮಾನತೆ ತರಲು, ಬಡವರಿಗೆ ಸರ್ಕಾರಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕಾಗುತ್ತದೆ. ಇದಕ್ಕಾಗಿ ಸಮೀಕ್ಷೆ ಅಗತ್ಯವಾಗಿದೆ. ಸಮೀಕ್ಷೆಯಿಂದ ಜಾತಿ ಒಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

19 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

19 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

19 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

20 hours ago