ಬೆಂಗಳೂರು : ಅಪಸ್ವರಗಳ ನಡುವೆಯೂ ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಆದಿ ಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದ ಅವರ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಾಮೀಜಿಗಳು ಕೆಲ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಅವು ಹೀಗಿವೆ..
ಒಕ್ಕಲಿಗರ ಸಭೆಯಲ್ಲಿ ಪ್ರಮುಖ ನಿರ್ಣಯ ಹೀಗಿದೆ….
ಒಕ್ಕಲಿಗರ ಸಮುದಾಯದವರ ಮನೆಗಳಿಗೆ ಜಾತಿ ಗಣತಿ ಸಮೀಕ್ಷೆಗೆಂದು ಬಂದಾಗ ಏನೆಂದು ಬರೆಸಬೇಕು ಎಂಬ ಚರ್ಚೆ ನಡೆದಿದೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಜಾತಿ ಕಾಲಂನಲ್ಲಿ ಒಕ್ಕಲಿಗ ಅಂತಷ್ಟೇ ಬರೆಸಬೇಕು ಎಂದು ನಿರ್ಧರಿಸಲಾಗಿದೆ.
ಒಕ್ಕಲಿಗ ಅಂತಾನೆ ಬರೆಸಬೇಕು
ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ ಕೈಗೊಳ್ಳಲಾಗಿದೆ. ಯಾರು ಗೊಂದಲ ಮಾಡಿಕೊಳ್ಳದಂತೆ ಸಭೆಯಲ್ಲಿ ಸ್ವಾಮೀಜಿ ಸಲಹೆ ನೀಡಿದ್ದಾರೆ. ಬಳಿಕ ಉಪಜಾತಿಯನ್ನು ಬೇಕಾದ್ರೆ ನಮೂದಿಸಿ ಕುಂಚಟಿಗ , ಮರಸು, ಸರ್ಪ, ಹಳ್ಳಿಕಾರ್ ಒಕ್ಕಲಿಗ ಅಂತ ಬರೆಸಬಹುದು. ಆದರೆ ಜಾತಿ ಕಾಲಂನಲ್ಲಿ ಒಕ್ಕಲಿಗ ಅಂತ ಮಾತ್ರ ಬರೆಸಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ.
ಸ್ವಾಮೀಜಿ ನಿರ್ಣಯಕ್ಕೆ ನಾಯಕರ ಅನುಮೋದನೆ
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಗಳು ಈ ನಿರ್ಣಯಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಚ್ಡಿ ಕುಮಾರಸ್ವಾಮಿ, ಆರ್.ಅಶೋಕ್, ಸದಾನಂದಗೌಡ ಸೇರಿದಂತೆ ಹಲವು ನಾಯಕರು ಅನುಮೋದಿಸಿದ್ದಾರೆ.
ನಮ್ಮದು ದೊಡ್ಡ ಸಮುದಾಯ, ಅದರಲ್ಲಿ ಉಪಪಂಗಡಗಳು ಸಹ ಇದೆ. ಮೂರು ಕಾಲಂ ಇರುತ್ತೆ. 9 ಜಾತಿ ಅಂತ ಇದೆ. ಒಕ್ಕಲಿಗ 10 ಉಪಜಾತಿ ಅಂತ ಇದೆ. ಹದಿನೈದು ದಿನಗಳು ಅವಕಾಶ ಕೊಟ್ಟಿದ್ದಾರೆ. ಜಾತಿ ಗಣತಿಗೆ ಇನ್ನೂ ಹೆಚ್ಚಿನ ದಿನಗಳು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…