ರಾಜ್ಯ

ಜಾತಿ ಸಮೀಕ್ಷೆ | ಜಾತಿಗಣತಿ ಕಾಲಂನಲ್ಲಿ ಒಕ್ಕಲಿಗರು ಏನೆಂದು ಬರೆಸಬೇಕು : ಸಭೆಯಲ್ಲಿ ನಿರ್ಮಲಾನಂದ ಸ್ವಾಮೀಜಿ ಸಲಹೆ ಹೀಗಿದೆ

ಬೆಂಗಳೂರು : ಅಪಸ್ವರಗಳ ನಡುವೆಯೂ ಸೆಪ್ಟೆಂಬರ್​ 22 ರಿಂದ ಜಾತಿ ಗಣತಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಆದಿ ಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದ ಅವರ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಾಮೀಜಿಗಳು ಕೆಲ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಅವು ಹೀಗಿವೆ..

ಒಕ್ಕಲಿಗರ ಸಭೆಯಲ್ಲಿ ಪ್ರಮುಖ ನಿರ್ಣಯ ಹೀಗಿದೆ….

ಒಕ್ಕಲಿಗರ ಸಮುದಾಯದವರ ಮನೆಗಳಿಗೆ ಜಾತಿ ಗಣತಿ ಸಮೀಕ್ಷೆಗೆಂದು ಬಂದಾಗ ಏನೆಂದು ಬರೆಸಬೇಕು ಎಂಬ ಚರ್ಚೆ ನಡೆದಿದೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಜಾತಿ ಕಾಲಂನಲ್ಲಿ ಒಕ್ಕಲಿಗ ಅಂತಷ್ಟೇ ಬರೆಸಬೇಕು ಎಂದು ನಿರ್ಧರಿಸಲಾಗಿದೆ.

ಒಕ್ಕಲಿಗ ಅಂತಾನೆ ಬರೆಸಬೇಕು
ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ ಕೈಗೊಳ್ಳಲಾಗಿದೆ. ಯಾರು ಗೊಂದಲ ಮಾಡಿಕೊಳ್ಳದಂತೆ ಸಭೆಯಲ್ಲಿ ಸ್ವಾಮೀಜಿ ಸಲಹೆ ನೀಡಿದ್ದಾರೆ. ಬಳಿಕ ಉಪಜಾತಿಯನ್ನು ಬೇಕಾದ್ರೆ ನಮೂದಿಸಿ ಕುಂಚಟಿಗ , ಮರಸು, ಸರ್ಪ, ಹಳ್ಳಿಕಾರ್ ಒಕ್ಕಲಿಗ ಅಂತ ಬರೆಸಬಹುದು. ಆದರೆ ಜಾತಿ‌ ಕಾಲಂನಲ್ಲಿ ಒಕ್ಕಲಿಗ ಅಂತ ಮಾತ್ರ ಬರೆಸಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ.

ಸ್ವಾಮೀಜಿ ನಿರ್ಣಯಕ್ಕೆ ನಾಯಕರ ಅನುಮೋದನೆ
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಗಳು ಈ ನಿರ್ಣಯಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಚ್​ಡಿ ಕುಮಾರಸ್ವಾಮಿ, ಆರ್.ಅಶೋಕ್‌, ಸದಾನಂದಗೌಡ ಸೇರಿದಂತೆ ಹಲವು ನಾಯಕರು ಅನುಮೋದಿಸಿದ್ದಾರೆ.

ನಮ್ಮದು ದೊಡ್ಡ ಸಮುದಾಯ, ಅದರಲ್ಲಿ ಉಪಪಂಗಡಗಳು ಸಹ ಇದೆ. ಮೂರು ಕಾಲಂ ಇರುತ್ತೆ. 9 ಜಾತಿ ಅಂತ ಇದೆ. ಒಕ್ಕಲಿಗ 10 ಉಪಜಾತಿ ಅಂತ ಇದೆ. ಹದಿನೈದು ದಿನಗಳು ಅವಕಾಶ ಕೊಟ್ಟಿದ್ದಾರೆ. ಜಾತಿ ಗಣತಿಗೆ ಇನ್ನೂ ಹೆಚ್ಚಿನ ದಿನಗಳು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

22 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

22 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

22 hours ago