ರಾಜ್ಯ

ಜಾತಿ ಸಮೀಕ್ಷೆ | ಜಾತಿಗಣತಿ ಕಾಲಂನಲ್ಲಿ ಒಕ್ಕಲಿಗರು ಏನೆಂದು ಬರೆಸಬೇಕು : ಸಭೆಯಲ್ಲಿ ನಿರ್ಮಲಾನಂದ ಸ್ವಾಮೀಜಿ ಸಲಹೆ ಹೀಗಿದೆ

ಬೆಂಗಳೂರು : ಅಪಸ್ವರಗಳ ನಡುವೆಯೂ ಸೆಪ್ಟೆಂಬರ್​ 22 ರಿಂದ ಜಾತಿ ಗಣತಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಆದಿ ಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದ ಅವರ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಾಮೀಜಿಗಳು ಕೆಲ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಅವು ಹೀಗಿವೆ..

ಒಕ್ಕಲಿಗರ ಸಭೆಯಲ್ಲಿ ಪ್ರಮುಖ ನಿರ್ಣಯ ಹೀಗಿದೆ….

ಒಕ್ಕಲಿಗರ ಸಮುದಾಯದವರ ಮನೆಗಳಿಗೆ ಜಾತಿ ಗಣತಿ ಸಮೀಕ್ಷೆಗೆಂದು ಬಂದಾಗ ಏನೆಂದು ಬರೆಸಬೇಕು ಎಂಬ ಚರ್ಚೆ ನಡೆದಿದೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಜಾತಿ ಕಾಲಂನಲ್ಲಿ ಒಕ್ಕಲಿಗ ಅಂತಷ್ಟೇ ಬರೆಸಬೇಕು ಎಂದು ನಿರ್ಧರಿಸಲಾಗಿದೆ.

ಒಕ್ಕಲಿಗ ಅಂತಾನೆ ಬರೆಸಬೇಕು
ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ ಕೈಗೊಳ್ಳಲಾಗಿದೆ. ಯಾರು ಗೊಂದಲ ಮಾಡಿಕೊಳ್ಳದಂತೆ ಸಭೆಯಲ್ಲಿ ಸ್ವಾಮೀಜಿ ಸಲಹೆ ನೀಡಿದ್ದಾರೆ. ಬಳಿಕ ಉಪಜಾತಿಯನ್ನು ಬೇಕಾದ್ರೆ ನಮೂದಿಸಿ ಕುಂಚಟಿಗ , ಮರಸು, ಸರ್ಪ, ಹಳ್ಳಿಕಾರ್ ಒಕ್ಕಲಿಗ ಅಂತ ಬರೆಸಬಹುದು. ಆದರೆ ಜಾತಿ‌ ಕಾಲಂನಲ್ಲಿ ಒಕ್ಕಲಿಗ ಅಂತ ಮಾತ್ರ ಬರೆಸಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ.

ಸ್ವಾಮೀಜಿ ನಿರ್ಣಯಕ್ಕೆ ನಾಯಕರ ಅನುಮೋದನೆ
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಗಳು ಈ ನಿರ್ಣಯಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಚ್​ಡಿ ಕುಮಾರಸ್ವಾಮಿ, ಆರ್.ಅಶೋಕ್‌, ಸದಾನಂದಗೌಡ ಸೇರಿದಂತೆ ಹಲವು ನಾಯಕರು ಅನುಮೋದಿಸಿದ್ದಾರೆ.

ನಮ್ಮದು ದೊಡ್ಡ ಸಮುದಾಯ, ಅದರಲ್ಲಿ ಉಪಪಂಗಡಗಳು ಸಹ ಇದೆ. ಮೂರು ಕಾಲಂ ಇರುತ್ತೆ. 9 ಜಾತಿ ಅಂತ ಇದೆ. ಒಕ್ಕಲಿಗ 10 ಉಪಜಾತಿ ಅಂತ ಇದೆ. ಹದಿನೈದು ದಿನಗಳು ಅವಕಾಶ ಕೊಟ್ಟಿದ್ದಾರೆ. ಜಾತಿ ಗಣತಿಗೆ ಇನ್ನೂ ಹೆಚ್ಚಿನ ದಿನಗಳು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

19 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

19 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

19 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

20 hours ago