ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ.
ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ.
ಜನವರಿ.16ರಿಂದ 18ರ ನಡುವೆ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿದ್ದವು. ಅರಣ್ಯ ಇಲಾಖೆಯ ವೈದ್ಯರು ಮೃತ ಜಿಂಕೆಗಳ ದೇಹದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಹಾಗೂ ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಪ್ರಯೋಗಾಲಯದ ವರದಿ ಅರಣ್ಯ ಇಲಾಖೆ ಅಧಿಕಾರಿಗಳ ಕೈಸೇರಿದೆ.
ಮೃಗಾಲಯದ ಜಿಂಕೆಗಳು ಸಾಂಕ್ರಾಮಿಕ ಖಾಯಿಲೆಯಿಂದ ಮೃತಪಟ್ಟಿವೆ ಎಂದು ಪ್ರಯೋಗಾಲಯ ವರದಿಯಿಂದ ಖಚಿತವಾಗಿದೆ. ಉಳಿದ ಜಿಂಕೆಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, ಪಶುವೈದ್ಯಕೀಯ ತಂಡ ಮೃಗಾಲಯದಲ್ಲಿ ಬೀಡುಬಿಟ್ಟಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…