ಬೆಂಗಳೂರು : ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ್ಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…