ಬೆಂಗಳೂರು: ಸಿ.ಬಿ.ಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ ಗೆ ರಾಜ್ಯದಲ್ಲಿ ಮುಕ್ತ ಅವಕಾಶವಿದ್ದುದನ್ನು ಹಿಂಪಡೆಯಲಾಗಿದೆ. ಸಿ.ಬಿ.ಐ ಗೆ ಸಹಜವಾದ ಪೂರ್ವಾಗ್ರಹ ಇದೆ ಎಂಬುದು ಇತ್ತೀಚಿನ ದಿನಗಳಲ್ಲಿ ದೃಢಪಡುತ್ತಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸಿ.ಬಿ.ಐ ಗೆ ಯಾವುದೇ ಮುಕ್ತ ಅವಕಾಶವಿರಬಾರದೆಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.
ಸಿ.ಬಿ.ಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ರಾಜಕೀಯ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಯಾವುದಾದರೂ ಪ್ರಕರಣದಲ್ಲಿ ಸಿ.ಬಿ.ಐ ಮೂಲಕ ತನಿಖೆ ನಡೆಯಬೇಕಾದರೆ ರಾಜ್ಯಸರ್ಕಾರದ ಒಪ್ಪಿಗೆ ಮುಖ್ಯವಾದದ್ದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿನ ಪ್ರಕರಣಗಳನ್ನು ಪ್ರಕರಣವಾರು ಆಧಾರದ ಮೇಲೆ ತನಿಖೆ ನಡೆಸಲು ಸಿ.ಬಿ.ಐ ತನಿಖಾ ಸಂಸ್ಥೆಗೆ ಅನುಮತಿ ನೀಡಲು ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…