ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ.
ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ, ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಈ ಬಗ್ಗೆ ಸಿಬಿಐ ತನಿಖೆ ನಡೆಸುವುದಾಗಿ ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಯತ್ನಾಳ್:
ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಮುಕ್ತಾಯದ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ನಡೆ ಕಾನೂನುಬಾಹಿರವಾಗಿದೆ. ಸರ್ಕಾರ ಮೊಟಕುಗೊಳಿಸುವ ಉದ್ದೇಶವಿದೆ ಅಂತಾ ಹೇಳಿದ್ದಾರೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ.
ಯತ್ನಾಳ್ಗೆ ಡಿಕೆಶಿ ತಿರುಗೇಟು:
ಕಾಂಗ್ರೆಸ್ ಸಂಪುಟ, ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ, ಇದಕ್ಕೆ ಯಾವಗ ಹೇಗೆ ಉತ್ತರ ಕೊಡಬೇಕು ಕೊಡ್ತೀನಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ:
ಕಾಂಗ್ರೆಸ್ ಸಂಪುಟದ ನಡೆಯನ್ನು ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದರೆ. ಈಗಾಗಲೇ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ನಿರ್ಧಾರ ಸಿದ್ದರಾಮಯ್ಯ ಅವರ ಆಡಳಿತಕ್ಕೆ ಕಪ್ಪು ಚುಕ್ಕೆ ಎಂದಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…