ರಾಜ್ಯ

CBSC RESULT 2024: 12th ಕ್ಲಾಸ್‌ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್‌ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ೦.೬೫ ರಷ್ಟು ಫಲಿತಾಂಶ ಈ ಬಾರಿ ಹೆಚ್ಚಿದೆ. ಕಳೆದ ವರ್ಷ ೮೭.೩೩ ರಷ್ಟು ಫಲಿತಾಂಶ ಇತ್ತು.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ೯೧.೫೪ ರಷ್ಟು ಬಾಲಕಿಯರು ಉತೀರ್ಣಗೊಂಡಿದ್ದರು, ಬಾಲಕರ ಉತ್ತೀರ್ಣ ದರಕ್ಕಿಂತ ೬.೪೦ ರಷ್ಟು ಹೆಚ್ಚು ಅಂಕ ಪಡೆದಿದ್ದಾರೆ. ಒಟ್ಟಾರೆ ೨೪ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೇ.೯೫ಕ್ಕಿಂತ ಹೆಚ್ಚಿನ ಅಂಕ ಪಡೆದರೆ, ೧.೧೬ ಲಕ್ಷ ವಿದ್ಯಾರ್ಥಿಗಳು ಶೇ ೯ಕ್ಕಿಂತ ಹೆಚ್ಚಿನ ಫಲಿತಾಂಶ ಗಳಿಸಿದ್ದಾರೆ.

ಫೆಬ್ರವರಿ ೧೫ ರಿಂದ ಏಪ್ರಿಲ್‌ ೨ರ ವರೆಗೆ ನಡೆದ ಈ ಪರೀಕ್ಷೆಯನ್ನು, ದೇಶಾದ್ಯಂತ ೭,೧೨೬ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ೧೬.೨೧ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೇರಳದ ತಿರುವಂನತಪುರ ಅತಿ ಹೆಚ್ಚಿನ ಪಾಸಿಂಗ್‌ ಪರ್ಸೆಂಟೇಜ್‌ ೯೯.೯೧ ಹೊಂದಿದೆ. ಬೆಂಗಳೂರಿನ ಉತ್ತೀರ್ಣತೆ ಶೇ.೯೬.೯೫ ರಷ್ಟಿದೆ.

ಸಿಬಿಎಸ್ ಸಿ ಫಲಿತಾಂಶ ವೀಕ್ಷಣೆಗಾಗಿ ವಿದ್ಯಾರ್ಥಿಗಳು cbsc.gov.in ಗೆ ಭೇಟಿ ನೀಡಿ ಫಲಿತಾಂಶ ವಿಕ್ಷೀಸಬಹುದು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

22 mins ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

25 mins ago

ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜಾರಿ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…

32 mins ago

ಮುಕ್ತಾಯ ಹಂತಕ್ಕೆ ತಲುಪಿದ ಬಯೋಮೈನಿಂಗ್

ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…

37 mins ago

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

8 hours ago