ರಾಜ್ಯ

CBSC RESULT 2024: 12th ಕ್ಲಾಸ್‌ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್‌ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ೦.೬೫ ರಷ್ಟು ಫಲಿತಾಂಶ ಈ ಬಾರಿ ಹೆಚ್ಚಿದೆ. ಕಳೆದ ವರ್ಷ ೮೭.೩೩ ರಷ್ಟು ಫಲಿತಾಂಶ ಇತ್ತು.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ೯೧.೫೪ ರಷ್ಟು ಬಾಲಕಿಯರು ಉತೀರ್ಣಗೊಂಡಿದ್ದರು, ಬಾಲಕರ ಉತ್ತೀರ್ಣ ದರಕ್ಕಿಂತ ೬.೪೦ ರಷ್ಟು ಹೆಚ್ಚು ಅಂಕ ಪಡೆದಿದ್ದಾರೆ. ಒಟ್ಟಾರೆ ೨೪ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೇ.೯೫ಕ್ಕಿಂತ ಹೆಚ್ಚಿನ ಅಂಕ ಪಡೆದರೆ, ೧.೧೬ ಲಕ್ಷ ವಿದ್ಯಾರ್ಥಿಗಳು ಶೇ ೯ಕ್ಕಿಂತ ಹೆಚ್ಚಿನ ಫಲಿತಾಂಶ ಗಳಿಸಿದ್ದಾರೆ.

ಫೆಬ್ರವರಿ ೧೫ ರಿಂದ ಏಪ್ರಿಲ್‌ ೨ರ ವರೆಗೆ ನಡೆದ ಈ ಪರೀಕ್ಷೆಯನ್ನು, ದೇಶಾದ್ಯಂತ ೭,೧೨೬ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ೧೬.೨೧ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೇರಳದ ತಿರುವಂನತಪುರ ಅತಿ ಹೆಚ್ಚಿನ ಪಾಸಿಂಗ್‌ ಪರ್ಸೆಂಟೇಜ್‌ ೯೯.೯೧ ಹೊಂದಿದೆ. ಬೆಂಗಳೂರಿನ ಉತ್ತೀರ್ಣತೆ ಶೇ.೯೬.೯೫ ರಷ್ಟಿದೆ.

ಸಿಬಿಎಸ್ ಸಿ ಫಲಿತಾಂಶ ವೀಕ್ಷಣೆಗಾಗಿ ವಿದ್ಯಾರ್ಥಿಗಳು cbsc.gov.in ಗೆ ಭೇಟಿ ನೀಡಿ ಫಲಿತಾಂಶ ವಿಕ್ಷೀಸಬಹುದು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago