ರಾಜ್ಯ

ಗೋಧ್ರಾ ರೀತಿ ಅಪಾಯ ಸಂಭವ ಹೇಳಿಕೆ; ಹರಿಪ್ರಸಾದ್‌ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್ ಜನವರಿ 3ರಂದು ಆಘಾತಕಾರಿ ಹೇಳಿಕೆ ನೀಡಿದ್ದರು. ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ ಎಂದು ಹರಿಪ್ರಸಾದ್‌ ತಿಳಿಸಿದ್ದರು.

ಈ ರೀತಿಯ ಹೇಳಿಕೆ ನೀಡಿದ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಬೇಕೆಂದು ಹಲವರು ಕಿಡಿಕಾರಿದ್ದರು ಹಾಗೂ ಇನ್ನೂ ಕೆಲವರು ದೂರನ್ನೂ ಸಹ ನೀಡಿದ್ದರು. ಸದ್ಯ ಸಿಸಿಬಿ ಪೊಲೀಸರು ಈ ರೀತಿಯ ಹೇಳಿಕೆ ನೀಡಿದ ಬಿಕೆ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದ್ದಾರೆ.

ಕೆಕೆ ಗೆಸ್ಟ್‌ಹೌಸ್‌ನಲ್ಲಿ ಹರಿಪ್ರಸಾದ್‌ ಅವರ ವಿಚಾರಣೆ ನಡೆದಿದ್ದು, ವಿಚಾರಣೆ ಬಳಿಕ ಮಾಧ್ಯಮದವರ ಜತೆ ಮಾತನಾಡಿರುವ ಹರಿಪ್ರಸಾದ್‌ ನನಗೆ ವಿವಿಐಪಿ ಟ್ರೀಟ್‌ಮೆಂಟ್‌ ಬೇಡ, ಬೇಕಿದ್ದರೆ ಅರೆಸ್ಟ್‌ ಮಾಡಿ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ ಸರ್ಕಾರದ ನಡೆ ವಿರುದ್ಧವೂ ಸಹ ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಕಾಂಗ್ರೆಸ್‌ ಸರ್ಕಾರವೇ ಅಥವಾ ಆರ್‌ಎಸ್‌ಎಸ್‌ ಸರ್ಕಾರವೇ, ನಾನು ಯಾವ ಸರ್ಕಾರದಲ್ಲಿದ್ದೇನೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ವಿಜಯೇಂದ್ರ ಅವರನ್ನೂ ಸಹ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಕಥೆಯೇ ಹೀಗಾದರೆ ಕಾಂಗ್ರೆಸ್‌ ಕಾರ್ಯಕರ್ತರ ಕಥೆ ಏನು ಎಂದೂ ಸಹ ಹರಿಪ್ರಸಾದ್‌ ಮಾತನಾಡಿದರು.

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

45 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

1 hour ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago