ರಾಜ್ಯ

ಗೋಧ್ರಾ ರೀತಿ ಅಪಾಯ ಸಂಭವ ಹೇಳಿಕೆ; ಹರಿಪ್ರಸಾದ್‌ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್ ಜನವರಿ 3ರಂದು ಆಘಾತಕಾರಿ ಹೇಳಿಕೆ ನೀಡಿದ್ದರು. ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ ಎಂದು ಹರಿಪ್ರಸಾದ್‌ ತಿಳಿಸಿದ್ದರು.

ಈ ರೀತಿಯ ಹೇಳಿಕೆ ನೀಡಿದ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಬೇಕೆಂದು ಹಲವರು ಕಿಡಿಕಾರಿದ್ದರು ಹಾಗೂ ಇನ್ನೂ ಕೆಲವರು ದೂರನ್ನೂ ಸಹ ನೀಡಿದ್ದರು. ಸದ್ಯ ಸಿಸಿಬಿ ಪೊಲೀಸರು ಈ ರೀತಿಯ ಹೇಳಿಕೆ ನೀಡಿದ ಬಿಕೆ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದ್ದಾರೆ.

ಕೆಕೆ ಗೆಸ್ಟ್‌ಹೌಸ್‌ನಲ್ಲಿ ಹರಿಪ್ರಸಾದ್‌ ಅವರ ವಿಚಾರಣೆ ನಡೆದಿದ್ದು, ವಿಚಾರಣೆ ಬಳಿಕ ಮಾಧ್ಯಮದವರ ಜತೆ ಮಾತನಾಡಿರುವ ಹರಿಪ್ರಸಾದ್‌ ನನಗೆ ವಿವಿಐಪಿ ಟ್ರೀಟ್‌ಮೆಂಟ್‌ ಬೇಡ, ಬೇಕಿದ್ದರೆ ಅರೆಸ್ಟ್‌ ಮಾಡಿ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ ಸರ್ಕಾರದ ನಡೆ ವಿರುದ್ಧವೂ ಸಹ ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಕಾಂಗ್ರೆಸ್‌ ಸರ್ಕಾರವೇ ಅಥವಾ ಆರ್‌ಎಸ್‌ಎಸ್‌ ಸರ್ಕಾರವೇ, ನಾನು ಯಾವ ಸರ್ಕಾರದಲ್ಲಿದ್ದೇನೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ವಿಜಯೇಂದ್ರ ಅವರನ್ನೂ ಸಹ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಕಥೆಯೇ ಹೀಗಾದರೆ ಕಾಂಗ್ರೆಸ್‌ ಕಾರ್ಯಕರ್ತರ ಕಥೆ ಏನು ಎಂದೂ ಸಹ ಹರಿಪ್ರಸಾದ್‌ ಮಾತನಾಡಿದರು.

andolana

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

53 mins ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

1 hour ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

7 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago