ರಾಜ್ಯ

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ

ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳೊಂದಿಗೆ ಸುವರ್ಣಸೌಧದ 318ನೇ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕೂಡ ಈ ಶತಮಾನೋತ್ಸವವನ್ನು ಸ್ಮರಣೀಯಗೊಳಿಸಲು ಬೆಳಗಾವಿ ಜಿಲ್ಲೆಯ ಆಯ್ದ 100 ಸ್ಥಳಗಳಲ್ಲಿ ತಲಾ 100 ಅಂದರೆ 10 ಸಾವಿರ ಶ್ರೀಗಂಧದ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ನಡೆಯಲಿರುವ ವನಮಹೋತ್ಸವದ ವೇಳೆ ನೆಡಲು ಉದ್ದೇಶಿಸಿರುವ 2 ಕೋಟಿ ಸಸಿಗಳ ಜೊತೆಗೆ ಹೆಚ್ಚುವರಿಯಾಗಿ ಶತಮಾನೋತ್ಸವದ ಸ್ಮರಣಾರ್ಥ 10 ಲಕ್ಷ ಸಸಿಗಳನ್ನು ನಡೆಲಾಗುವುದು ಎಂದರು.

ಶ್ರೀಗಂಧ ನಮ್ಮ ನಾಡಿನ ಅಸ್ಮಿತೆ. ಕನ್ನಡನಾಡಿಗೆ ಗಂಧದಗುಡಿ ಎಂಬ ಖ್ಯಾತಿ ಇದೆ. ಶ್ರೀಗಂಧದ ಮರಕ್ಕೆ ಬಂಗಾರದ ಬೆಲೆ ಇದೆ. ಹೀಗಾಗಿ ಮರಗಳ ಕಳ್ಳತನ ಆಗದಂತೆ ಸುರಕ್ಷಿತವಾದ 100 ಸ್ಥಳಗಳನ್ನು ಆಯ್ಕೆ ಮಾಡಿ, ಪ್ರತಿ ತಾಣದಲ್ಲಿ 100 ಶ್ರೀಗಂಧದ ಸಸಿ ನೆಟ್ಟು ಬೆಳೆಸಿ, ರಕ್ಷಿಸಲಾಗುವುದು ಎಂದು ವಿವರಿಸಿದರು.

ಶ್ರೀಗಂಧದ ಸಸಿಗಳನ್ನು ನೆಡುವ ತಾಣಗಳಲ್ಲಿ ಮಹಾತ್ಮಾಗಾಂಧೀಜಿ ಅವರು 1924ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಛಾಯಾಚಿತ್ರಗಳು ಮತ್ತು ಅಧಿವೇಶನದ ಸಂಕ್ಷಿಪ್ತ ವಿವರವನ್ನು ಪ್ರದರ್ಶಿಸಲಾಗುವುದು.ಇದರಿಂದ ಇಂದಿನ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ತಿಳಿಯುತ್ತದೆ. ಜೊತೆಗೆ ಶ್ರೀಗಂಧದ ಬೀಡು, ಗಂಧದಗುಡಿ ಎಂಬ ಖ್ಯಾತಿ ಚಾಮರಾಜನಗರದಿಂದ ಬೆಳಗಾವಿಯವರೆಗೆ ಚಿರಸ್ಥಾಯಿಯಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago