ರಾಜ್ಯ

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ

ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳೊಂದಿಗೆ ಸುವರ್ಣಸೌಧದ 318ನೇ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕೂಡ ಈ ಶತಮಾನೋತ್ಸವವನ್ನು ಸ್ಮರಣೀಯಗೊಳಿಸಲು ಬೆಳಗಾವಿ ಜಿಲ್ಲೆಯ ಆಯ್ದ 100 ಸ್ಥಳಗಳಲ್ಲಿ ತಲಾ 100 ಅಂದರೆ 10 ಸಾವಿರ ಶ್ರೀಗಂಧದ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ನಡೆಯಲಿರುವ ವನಮಹೋತ್ಸವದ ವೇಳೆ ನೆಡಲು ಉದ್ದೇಶಿಸಿರುವ 2 ಕೋಟಿ ಸಸಿಗಳ ಜೊತೆಗೆ ಹೆಚ್ಚುವರಿಯಾಗಿ ಶತಮಾನೋತ್ಸವದ ಸ್ಮರಣಾರ್ಥ 10 ಲಕ್ಷ ಸಸಿಗಳನ್ನು ನಡೆಲಾಗುವುದು ಎಂದರು.

ಶ್ರೀಗಂಧ ನಮ್ಮ ನಾಡಿನ ಅಸ್ಮಿತೆ. ಕನ್ನಡನಾಡಿಗೆ ಗಂಧದಗುಡಿ ಎಂಬ ಖ್ಯಾತಿ ಇದೆ. ಶ್ರೀಗಂಧದ ಮರಕ್ಕೆ ಬಂಗಾರದ ಬೆಲೆ ಇದೆ. ಹೀಗಾಗಿ ಮರಗಳ ಕಳ್ಳತನ ಆಗದಂತೆ ಸುರಕ್ಷಿತವಾದ 100 ಸ್ಥಳಗಳನ್ನು ಆಯ್ಕೆ ಮಾಡಿ, ಪ್ರತಿ ತಾಣದಲ್ಲಿ 100 ಶ್ರೀಗಂಧದ ಸಸಿ ನೆಟ್ಟು ಬೆಳೆಸಿ, ರಕ್ಷಿಸಲಾಗುವುದು ಎಂದು ವಿವರಿಸಿದರು.

ಶ್ರೀಗಂಧದ ಸಸಿಗಳನ್ನು ನೆಡುವ ತಾಣಗಳಲ್ಲಿ ಮಹಾತ್ಮಾಗಾಂಧೀಜಿ ಅವರು 1924ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಛಾಯಾಚಿತ್ರಗಳು ಮತ್ತು ಅಧಿವೇಶನದ ಸಂಕ್ಷಿಪ್ತ ವಿವರವನ್ನು ಪ್ರದರ್ಶಿಸಲಾಗುವುದು.ಇದರಿಂದ ಇಂದಿನ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ತಿಳಿಯುತ್ತದೆ. ಜೊತೆಗೆ ಶ್ರೀಗಂಧದ ಬೀಡು, ಗಂಧದಗುಡಿ ಎಂಬ ಖ್ಯಾತಿ ಚಾಮರಾಜನಗರದಿಂದ ಬೆಳಗಾವಿಯವರೆಗೆ ಚಿರಸ್ಥಾಯಿಯಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

1 hour ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

1 hour ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

2 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

2 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

2 hours ago