ರಾಜ್ಯ

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ

ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳೊಂದಿಗೆ ಸುವರ್ಣಸೌಧದ 318ನೇ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕೂಡ ಈ ಶತಮಾನೋತ್ಸವವನ್ನು ಸ್ಮರಣೀಯಗೊಳಿಸಲು ಬೆಳಗಾವಿ ಜಿಲ್ಲೆಯ ಆಯ್ದ 100 ಸ್ಥಳಗಳಲ್ಲಿ ತಲಾ 100 ಅಂದರೆ 10 ಸಾವಿರ ಶ್ರೀಗಂಧದ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ನಡೆಯಲಿರುವ ವನಮಹೋತ್ಸವದ ವೇಳೆ ನೆಡಲು ಉದ್ದೇಶಿಸಿರುವ 2 ಕೋಟಿ ಸಸಿಗಳ ಜೊತೆಗೆ ಹೆಚ್ಚುವರಿಯಾಗಿ ಶತಮಾನೋತ್ಸವದ ಸ್ಮರಣಾರ್ಥ 10 ಲಕ್ಷ ಸಸಿಗಳನ್ನು ನಡೆಲಾಗುವುದು ಎಂದರು.

ಶ್ರೀಗಂಧ ನಮ್ಮ ನಾಡಿನ ಅಸ್ಮಿತೆ. ಕನ್ನಡನಾಡಿಗೆ ಗಂಧದಗುಡಿ ಎಂಬ ಖ್ಯಾತಿ ಇದೆ. ಶ್ರೀಗಂಧದ ಮರಕ್ಕೆ ಬಂಗಾರದ ಬೆಲೆ ಇದೆ. ಹೀಗಾಗಿ ಮರಗಳ ಕಳ್ಳತನ ಆಗದಂತೆ ಸುರಕ್ಷಿತವಾದ 100 ಸ್ಥಳಗಳನ್ನು ಆಯ್ಕೆ ಮಾಡಿ, ಪ್ರತಿ ತಾಣದಲ್ಲಿ 100 ಶ್ರೀಗಂಧದ ಸಸಿ ನೆಟ್ಟು ಬೆಳೆಸಿ, ರಕ್ಷಿಸಲಾಗುವುದು ಎಂದು ವಿವರಿಸಿದರು.

ಶ್ರೀಗಂಧದ ಸಸಿಗಳನ್ನು ನೆಡುವ ತಾಣಗಳಲ್ಲಿ ಮಹಾತ್ಮಾಗಾಂಧೀಜಿ ಅವರು 1924ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಛಾಯಾಚಿತ್ರಗಳು ಮತ್ತು ಅಧಿವೇಶನದ ಸಂಕ್ಷಿಪ್ತ ವಿವರವನ್ನು ಪ್ರದರ್ಶಿಸಲಾಗುವುದು.ಇದರಿಂದ ಇಂದಿನ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ತಿಳಿಯುತ್ತದೆ. ಜೊತೆಗೆ ಶ್ರೀಗಂಧದ ಬೀಡು, ಗಂಧದಗುಡಿ ಎಂಬ ಖ್ಯಾತಿ ಚಾಮರಾಜನಗರದಿಂದ ಬೆಳಗಾವಿಯವರೆಗೆ ಚಿರಸ್ಥಾಯಿಯಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

20 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

20 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

20 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

21 hours ago