ರಾಜ್ಯ

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ

ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳೊಂದಿಗೆ ಸುವರ್ಣಸೌಧದ 318ನೇ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕೂಡ ಈ ಶತಮಾನೋತ್ಸವವನ್ನು ಸ್ಮರಣೀಯಗೊಳಿಸಲು ಬೆಳಗಾವಿ ಜಿಲ್ಲೆಯ ಆಯ್ದ 100 ಸ್ಥಳಗಳಲ್ಲಿ ತಲಾ 100 ಅಂದರೆ 10 ಸಾವಿರ ಶ್ರೀಗಂಧದ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ನಡೆಯಲಿರುವ ವನಮಹೋತ್ಸವದ ವೇಳೆ ನೆಡಲು ಉದ್ದೇಶಿಸಿರುವ 2 ಕೋಟಿ ಸಸಿಗಳ ಜೊತೆಗೆ ಹೆಚ್ಚುವರಿಯಾಗಿ ಶತಮಾನೋತ್ಸವದ ಸ್ಮರಣಾರ್ಥ 10 ಲಕ್ಷ ಸಸಿಗಳನ್ನು ನಡೆಲಾಗುವುದು ಎಂದರು.

ಶ್ರೀಗಂಧ ನಮ್ಮ ನಾಡಿನ ಅಸ್ಮಿತೆ. ಕನ್ನಡನಾಡಿಗೆ ಗಂಧದಗುಡಿ ಎಂಬ ಖ್ಯಾತಿ ಇದೆ. ಶ್ರೀಗಂಧದ ಮರಕ್ಕೆ ಬಂಗಾರದ ಬೆಲೆ ಇದೆ. ಹೀಗಾಗಿ ಮರಗಳ ಕಳ್ಳತನ ಆಗದಂತೆ ಸುರಕ್ಷಿತವಾದ 100 ಸ್ಥಳಗಳನ್ನು ಆಯ್ಕೆ ಮಾಡಿ, ಪ್ರತಿ ತಾಣದಲ್ಲಿ 100 ಶ್ರೀಗಂಧದ ಸಸಿ ನೆಟ್ಟು ಬೆಳೆಸಿ, ರಕ್ಷಿಸಲಾಗುವುದು ಎಂದು ವಿವರಿಸಿದರು.

ಶ್ರೀಗಂಧದ ಸಸಿಗಳನ್ನು ನೆಡುವ ತಾಣಗಳಲ್ಲಿ ಮಹಾತ್ಮಾಗಾಂಧೀಜಿ ಅವರು 1924ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಛಾಯಾಚಿತ್ರಗಳು ಮತ್ತು ಅಧಿವೇಶನದ ಸಂಕ್ಷಿಪ್ತ ವಿವರವನ್ನು ಪ್ರದರ್ಶಿಸಲಾಗುವುದು.ಇದರಿಂದ ಇಂದಿನ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ತಿಳಿಯುತ್ತದೆ. ಜೊತೆಗೆ ಶ್ರೀಗಂಧದ ಬೀಡು, ಗಂಧದಗುಡಿ ಎಂಬ ಖ್ಯಾತಿ ಚಾಮರಾಜನಗರದಿಂದ ಬೆಳಗಾವಿಯವರೆಗೆ ಚಿರಸ್ಥಾಯಿಯಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

5 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

5 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

6 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

7 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

11 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

11 hours ago