ರಾಜ್ಯ

ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ: ಸಿಎಂ

ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ: ಸಿಎಂ

ಧಾರವಾಡ :ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ. ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ” ಎನ್ನುವ ಸಹಕಾರ ತತ್ವದ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ಬ್ಯಾಂಕ್ ಯಶಸ್ವೀ ಶತಮಾನೋತ್ಸವ ಆಚರಿಸಲು ಸಾಧ್ಯವಾಗಿದೆ.

ರೆಡ್ಡಿ ಸಮುದಾಯದವರು ಮೂಲತಃ ಕೃಷಿಕರು. ರೆಡ್ಡಿ ಬ್ಯಾಂಕ್ ಗೂ ಕೂಡ ರೈತರೇ ಮೂಲ. ಏಷ್ಯಾದಲ್ಲೇ ಮೊದಲು ಸಹಕಾರ ಚಳವಳಿಗೆ ಕರ್ನಾಟಕ ಸಾಕ್ಷಿ ಆಗಿರುವ ಚರಿತ್ರೆ ಇದೆ. ನಮ್ಮ ಸರ್ಕಾರ ಸಹಕಾರಿ ಕ್ಷೇತ್ರಕ್ಕೆ ಅಗತ್ಯವಾದ ಆರ್ಥಿಕ ಸಹಕಾರ ನೀಡಲು ಸಿದ್ದವಿದೆ ಎಂದು ಭರವಸೆ ನೀಡಿದರು.

ರೆಡ್ಡಿ ಬ್ಯಾಂಕ್ ಇನ್ನಷ್ಟು ಯಶಸ್ಸು ಕಂಡು ದೀರ್ಘ ಕಾಲ ರೈತರಿಗೆ ನೆರವಾಗಲಿ. ದೇಶದಲ್ಲಿ ಅಸಮಾನತೆ ಇದೆ. ರೈತರು ಸಂಕಷ್ಟದಲ್ಲಿದೆ. ಸಹಕಾರ ಕ್ಷೇತ್ರ ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿದೆ ಎಂದು ಹಾರೈಸಿದರು.

ಮಹಾಯೋಗಿ ವೇಮನ ಸಂಸ್ಥಾನ ಮಠದ ಶ್ರೀ ವೇಮನಾನಂದ ಮಹಾಸ್ವಾಮಿಗಳು, ಧಾರವಾಡ ಮುರುಘಾಮಠದ ಡಾ.ಮ.ನಿ.ಪ್ರ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ ಸೇರಿ 60 ಕ್ಕೂ ಹೆಚ್ಚು ಸಹಕಾರಿ ಧುರೀಣರು ಮತ್ತು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

12 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

14 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 hours ago