ರಾಜ್ಯ

ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ: ಸಿಎಂ

ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ: ಸಿಎಂ

ಧಾರವಾಡ :ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ. ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ” ಎನ್ನುವ ಸಹಕಾರ ತತ್ವದ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ಬ್ಯಾಂಕ್ ಯಶಸ್ವೀ ಶತಮಾನೋತ್ಸವ ಆಚರಿಸಲು ಸಾಧ್ಯವಾಗಿದೆ.

ರೆಡ್ಡಿ ಸಮುದಾಯದವರು ಮೂಲತಃ ಕೃಷಿಕರು. ರೆಡ್ಡಿ ಬ್ಯಾಂಕ್ ಗೂ ಕೂಡ ರೈತರೇ ಮೂಲ. ಏಷ್ಯಾದಲ್ಲೇ ಮೊದಲು ಸಹಕಾರ ಚಳವಳಿಗೆ ಕರ್ನಾಟಕ ಸಾಕ್ಷಿ ಆಗಿರುವ ಚರಿತ್ರೆ ಇದೆ. ನಮ್ಮ ಸರ್ಕಾರ ಸಹಕಾರಿ ಕ್ಷೇತ್ರಕ್ಕೆ ಅಗತ್ಯವಾದ ಆರ್ಥಿಕ ಸಹಕಾರ ನೀಡಲು ಸಿದ್ದವಿದೆ ಎಂದು ಭರವಸೆ ನೀಡಿದರು.

ರೆಡ್ಡಿ ಬ್ಯಾಂಕ್ ಇನ್ನಷ್ಟು ಯಶಸ್ಸು ಕಂಡು ದೀರ್ಘ ಕಾಲ ರೈತರಿಗೆ ನೆರವಾಗಲಿ. ದೇಶದಲ್ಲಿ ಅಸಮಾನತೆ ಇದೆ. ರೈತರು ಸಂಕಷ್ಟದಲ್ಲಿದೆ. ಸಹಕಾರ ಕ್ಷೇತ್ರ ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿದೆ ಎಂದು ಹಾರೈಸಿದರು.

ಮಹಾಯೋಗಿ ವೇಮನ ಸಂಸ್ಥಾನ ಮಠದ ಶ್ರೀ ವೇಮನಾನಂದ ಮಹಾಸ್ವಾಮಿಗಳು, ಧಾರವಾಡ ಮುರುಘಾಮಠದ ಡಾ.ಮ.ನಿ.ಪ್ರ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ ಸೇರಿ 60 ಕ್ಕೂ ಹೆಚ್ಚು ಸಹಕಾರಿ ಧುರೀಣರು ಮತ್ತು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

8 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

8 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago