ರಾಜ್ಯ

ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ: ಸಿಎಂ

ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ: ಸಿಎಂ

ಧಾರವಾಡ :ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ. ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ” ಎನ್ನುವ ಸಹಕಾರ ತತ್ವದ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ಬ್ಯಾಂಕ್ ಯಶಸ್ವೀ ಶತಮಾನೋತ್ಸವ ಆಚರಿಸಲು ಸಾಧ್ಯವಾಗಿದೆ.

ರೆಡ್ಡಿ ಸಮುದಾಯದವರು ಮೂಲತಃ ಕೃಷಿಕರು. ರೆಡ್ಡಿ ಬ್ಯಾಂಕ್ ಗೂ ಕೂಡ ರೈತರೇ ಮೂಲ. ಏಷ್ಯಾದಲ್ಲೇ ಮೊದಲು ಸಹಕಾರ ಚಳವಳಿಗೆ ಕರ್ನಾಟಕ ಸಾಕ್ಷಿ ಆಗಿರುವ ಚರಿತ್ರೆ ಇದೆ. ನಮ್ಮ ಸರ್ಕಾರ ಸಹಕಾರಿ ಕ್ಷೇತ್ರಕ್ಕೆ ಅಗತ್ಯವಾದ ಆರ್ಥಿಕ ಸಹಕಾರ ನೀಡಲು ಸಿದ್ದವಿದೆ ಎಂದು ಭರವಸೆ ನೀಡಿದರು.

ರೆಡ್ಡಿ ಬ್ಯಾಂಕ್ ಇನ್ನಷ್ಟು ಯಶಸ್ಸು ಕಂಡು ದೀರ್ಘ ಕಾಲ ರೈತರಿಗೆ ನೆರವಾಗಲಿ. ದೇಶದಲ್ಲಿ ಅಸಮಾನತೆ ಇದೆ. ರೈತರು ಸಂಕಷ್ಟದಲ್ಲಿದೆ. ಸಹಕಾರ ಕ್ಷೇತ್ರ ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿದೆ ಎಂದು ಹಾರೈಸಿದರು.

ಮಹಾಯೋಗಿ ವೇಮನ ಸಂಸ್ಥಾನ ಮಠದ ಶ್ರೀ ವೇಮನಾನಂದ ಮಹಾಸ್ವಾಮಿಗಳು, ಧಾರವಾಡ ಮುರುಘಾಮಠದ ಡಾ.ಮ.ನಿ.ಪ್ರ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ ಸೇರಿ 60 ಕ್ಕೂ ಹೆಚ್ಚು ಸಹಕಾರಿ ಧುರೀಣರು ಮತ್ತು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago