ರಾಜ್ಯ

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ

ಮಹಾನುಭವರ ಆಚಾರ ವಿಚಾರ ಸಂದೇಶಗಳನ್ನು ಸಮಾಜಕ್ಕೆ ತಲುಪಿಸಲು ಜಯಂತಿಗಳ ಆಚರಣೆ -ಡಾ ಪಿ ಶಿವರಾಜು

ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ ಸಂದೇಶಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ರೇಣುಕಾಚಾರ್ಯ ಜಯಂತಿ, ಯೋಗಿನಾರೇಯಣ ಯತಿಂದ್ರರ ಜಯಂತಿ ಹಾಗೂ ಅಗ್ನಿ ಬನ್ನಿರಾಯ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಚ್ 12 ರಂದು ಸಂಜೆ 04 ಗಂಟೆಗೆ ರೇಣುಕಾಚಾರ್ಯ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ, ಮಾರ್ಚ್ 14 ರಂದು ಬೆಳಗ್ಗೆ 11.30 ಗಂಟೆಗೆ ಯೋಗಿನಾರೇಯಣ ಯತಿಂದ್ರರ ಜಯಂತಿಯನ್ನು ಕಿರುರಂಗಮಂದಿರದಲ್ಲಿ ಹಾಗೂ ಮಾರ್ಚ್ 28 ರಂದು ಮಧ್ಯಾಹ್ನ 12 ಗಂಟೆಗೆ ಅಗ್ನಿ ಬನ್ನಿರಾಯ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಜಯಂತಿಗಳ ಆಚರಣೆಗೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

4 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

4 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

5 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago