ಮಹಾನುಭವರ ಆಚಾರ ವಿಚಾರ ಸಂದೇಶಗಳನ್ನು ಸಮಾಜಕ್ಕೆ ತಲುಪಿಸಲು ಜಯಂತಿಗಳ ಆಚರಣೆ -ಡಾ ಪಿ ಶಿವರಾಜು
ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ ಸಂದೇಶಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ರೇಣುಕಾಚಾರ್ಯ ಜಯಂತಿ, ಯೋಗಿನಾರೇಯಣ ಯತಿಂದ್ರರ ಜಯಂತಿ ಹಾಗೂ ಅಗ್ನಿ ಬನ್ನಿರಾಯ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ 12 ರಂದು ಸಂಜೆ 04 ಗಂಟೆಗೆ ರೇಣುಕಾಚಾರ್ಯ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ, ಮಾರ್ಚ್ 14 ರಂದು ಬೆಳಗ್ಗೆ 11.30 ಗಂಟೆಗೆ ಯೋಗಿನಾರೇಯಣ ಯತಿಂದ್ರರ ಜಯಂತಿಯನ್ನು ಕಿರುರಂಗಮಂದಿರದಲ್ಲಿ ಹಾಗೂ ಮಾರ್ಚ್ 28 ರಂದು ಮಧ್ಯಾಹ್ನ 12 ಗಂಟೆಗೆ ಅಗ್ನಿ ಬನ್ನಿರಾಯ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಜಯಂತಿಗಳ ಆಚರಣೆಗೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…