ಮಹಾನುಭವರ ಆಚಾರ ವಿಚಾರ ಸಂದೇಶಗಳನ್ನು ಸಮಾಜಕ್ಕೆ ತಲುಪಿಸಲು ಜಯಂತಿಗಳ ಆಚರಣೆ -ಡಾ ಪಿ ಶಿವರಾಜು
ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ ಸಂದೇಶಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ರೇಣುಕಾಚಾರ್ಯ ಜಯಂತಿ, ಯೋಗಿನಾರೇಯಣ ಯತಿಂದ್ರರ ಜಯಂತಿ ಹಾಗೂ ಅಗ್ನಿ ಬನ್ನಿರಾಯ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ 12 ರಂದು ಸಂಜೆ 04 ಗಂಟೆಗೆ ರೇಣುಕಾಚಾರ್ಯ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ, ಮಾರ್ಚ್ 14 ರಂದು ಬೆಳಗ್ಗೆ 11.30 ಗಂಟೆಗೆ ಯೋಗಿನಾರೇಯಣ ಯತಿಂದ್ರರ ಜಯಂತಿಯನ್ನು ಕಿರುರಂಗಮಂದಿರದಲ್ಲಿ ಹಾಗೂ ಮಾರ್ಚ್ 28 ರಂದು ಮಧ್ಯಾಹ್ನ 12 ಗಂಟೆಗೆ ಅಗ್ನಿ ಬನ್ನಿರಾಯ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಜಯಂತಿಗಳ ಆಚರಣೆಗೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…