ಬೆಂಗಳೂರು : ರಾಜ್ಯ ಹಿಂದಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯು ಅವೈಜ್ಞಾನಿಕವಾಗಿದ್ದು, ಈ ಸಂಬಂಧ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ದಾರೆ.
ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿದ ಜಾತಿ ಗಣತಿ ವರದಿ ಸರಿಯಿಲ್ಲ, ಲೋಪದಿಂದ ಕೂಡಿದೆ. ಇದನ್ನು ನಾವು ವಿರೋಧ ಮಾಡುತ್ತಿದೇವೆ. ವೈಜ್ಞಾನಿಕ ವರದಿ ಮತ್ತೊಮ್ಮೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒಕ್ಕಲಿಗರಾಗಿ ಈ ವರದಿಯನ್ನು ವಿರೋಧಿಸುತ್ತೇವೆ. ಪ್ರತ್ಯೇಕ ಲಿಂಗಾಯಿತ ಧರ್ಮ ಎಂದು ಹೋದವರು ಸೋತರು, ಲಿಂಗಾಯಿತ ಎಂದು ಕೂಗಿದವರು ಮಣ್ಣು ಕಚ್ಚಿದರು ಎಂದು ವ್ಯಂಗವಾಡಿದರು.
ಜಾತಿ ವಿಚಾರ ಮಾತನಾಡಿದ್ದು ತಪ್ಪು ಎಂಬ ಕಾಂಗ್ರೆಸ್ ನಾಯಕ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಚಿವ ಸಂಪುಟ ಸೇರಲು ಏನೇನೋ ಮಾತನಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…